ಬೆಂಗಳೂರು : ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶ ಉಲ್ಲಂಘಿಸಿ ವಿಡಿಯೋ ಮಾಡಿದ ‘ದೂತ’ ಖ್ಯಾತಿಯ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಸಮೀರ್ ವಿರುದ್ಧ ಧರ್ಮಸ್ಥಳದ ಹರ್ಷೇಂದ್ರ ಕುಮಾರ್ ಮತ್ತು ನಿಶ್ವಲ್ ಎಂಬವರು ಬೆಂಗಳೂರಿನಲ್ಲಿ ಮಾನನಷ್ಟ ಮೊಕದ್ದಮೆ‌ ದಾಖಲಿಸಿದ್ದಾರೆ. 10 ಕೋಟಿ ರೂ. ಪರಿಹಾರ ಕೊಡಿಸಬೇಕೆಂದು ಕೋರಿದ್ದಾರೆ.

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದ ‘ಊರ ಗೌಡ’ರನ್ನು ಉಲ್ಲೇಖಿಸಿ ಸಮೀರ್‌ ವಿಡಿಯೋ ಮಾಡಿದ್ದರು. ಆ ವಿಡಿಯೋ ರಾಜ್ಯಸಭಾ ಸದಸ್ಯ, ಧರ್ಮಸ್ಥಳದ ವಿರೇಂದ್ರ ಹೆಗಡೆ ಅವರನ್ನು ಗುರಿಯಾಸಿಕೊಂಡಿದೆ ಎಂದು ಆರೋಪಿಸಲಾಗಿತ್ತು. ವಿಡಿಯೋ ಡಿಲೀಟ್ ಮಾಡುವಂತೆ ಧರ್ಮಸ್ಥಳದ ಪರವಾಗಿ ಕೆಲವರು ನ್ಯಾಯಾಲಯದಿಂದ ಆದೇಶ ತಂದಿದ್ದರು.

ಆದಾಗ್ಯೂ, ಸಮೀರ್ ವಿಡಿಯೋ ಡಿಲೀಟ್ ಮಾಡಿರಲಿಲ್ಲ. ಈಗ ಸಮೀರ್ ವಿರುದ್ಧ ಧರ್ಮಸ್ಥಳದ ಪರವಾಗಿ ಡಿ. ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ 10 ಕೋಟಿ ರೂ. ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ.

ಮಾನನಷ್ಟ ಮೊಕದ್ದಮೆ ಅರ್ಜಿ ಪರಿಶೀಲಿಸಿರುವ ಬೆಂಗಳೂರಿನ ಸಿಟಿ ಸಿವಿಲ್‌ ನ್ಯಾಯಾಧೀಶ ಎಸ್‌. ನಟರಾಜ್‌ ಅವರು ಪ್ರತಿವಾದಿ ಸಮೀರ್‌ಗೆ ನೋಟಿಸ್‌ ಜಾರಿ ಮಾಡಿದ್ದಾರೆ. ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೋವನ್ನು ತಕ್ಷಣ ಡಿಲೀಟ್‌ ಮಾಡಬೇಕು. ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿದ್ದಾರೆ.

ಇತ್ತೀಚೆಗೆ ಯೂಟ್ಯೂಬ್ ನಲ್ಲಿ ವೀಕ್ಷಣೆ ಪಡೆದು ಧರ್ಮಸ್ಥಳ ಸೌಜನ್ಯ ಪ್ರಕರಣ ಕೆದಕಿದ್ದ ಸಮೀರ್ ಸುದ್ದಿ ಮಾಡಿದ್ದ. ಆ ನಂತರ ಕೆಲವು ದಿನಗಳ ಬಳಿಕ ಅದೇ ಧರ್ಮಸ್ಥಳದ ಕುರಿತಾಗಿ ಅಲ್ಲಿ ನಡೆದ ಕೊಲೆ ಅತ್ಯಾಚಾರ, ಅಪಹರಣ ಪ್ರಕರಣಗಳಿಗೆ ಸಂಬಂಧಿಸಿದಂತೆ ಇನ್ನೊಂದು ವಿಡಿಯೋ ಮಾಡಲಾಗಿತ್ತು.

ಈ ಎರಡನೇ ವಿಡಿಯೋಗೆ ಸಂಬಂಧಿಸಿದಂತೆ ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. 10 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

ಇದೀಗ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್‌ ಮತ್ತು ನಿಶ್ಚಲ್‌ ಡಿ. ಎಂಬ ವ್ಯಕ್ತಿಗಳು ಹತ್ತು ಕೋಟಿ ರುಪಾಯಿಗಳ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

ಧರ್ಮಸ್ಥಳ ಹಾರರ್‌ ಹೆಸರಿನ ವಿಡಿಯೋವನ್ನು ಕೋರ್ಟ್‌ ಆದೇಶ ಉಲ್ಲೇಖಿಸಿ ಯೂಟ್ಯೂಬ್‌ ನಿಂದ ತೆಗೆದುಹಾಕಲಾಗಿತ್ತಾದರೂ, ಅದು ಭಾರತದಿಂದ ಹೊರಗಿನ ದೇಶಗಳಲ್ಲಿ ಈಗಲೂ ವೀಕ್ಷಣೆಗೆ ಲಭ್ಯವಿದೆ. ಇದರ ಬೆನ್ನಲ್ಲೇ ಸಾಕ್ಷ್ಯ ನಾಶ ಎಂಬ ಎರಡನೇ ವಿಡಿಯೋವನ್ನು ಸಮೀರ್‌ ಬಿಡುಗಡೆ ಮಾಡಿದ್ದ.