Join The Telegram | Join The WhatsApp |
ಬೆಂಗಳೂರು-
ತಾನು ಐಪಿಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬರಿಗೆ 2.5 ಕೋಟಿ ವಂಚನೆ ಮಾಡಿರುವ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀನಿವಾಸ್ ಎಂಬಾತನೇ ಐಪಿಎಸ್ ಎಂದು ವಂಚಿಸಿದ ಆರೋಪಿ. ತಾನು ಪ್ರೊಬೇಷನರಿ ಎಸ್.ಪಿ ಎಂದು ಕೆಲ ಪೊಲೀಸ್ ಠಾಣೆಗಳಿಗೂ ಸಮವಸ್ತ್ರದಲ್ಲೆ ಹೋಗಿದ್ದನಂತೆ. ಈ ವೇಳೆ ತಲಘಟ್ಟಪುರ ನಿವಾಸಿ ಒರ್ವರಿಗೆ ಪರಿಚಯವಾಗಿದ್ದಾನೆ. ಬಳಿಕ ತಾನು ಮೈಸೂರಿನಲ್ಲಿ ಪ್ರಸ್ತುತ ಕೆಲಸ ಮಾಡುತ್ತಿದ್ದೇನೆ ಎಂದು ನಂಬಿಸಿ, ಮೈಸೂರಿನ ಲ್ಯಾಂಡ್ ವ್ಯವಹಾರದಲ್ಲಿ 450ಕೋಟಿ ವ್ಯವಹಾರ ಇದೆ ಅದು ಡೀಲ್ ಆದ್ರೆ 250 ಕೋಟಿ ಸಿಗುತ್ತೆ ಎಂದು ನಂಬಿಸಿ. ಸದ್ಯ ಒಂದಷ್ಟು ಹಣ ಬೇಕು ಎಂದು ಕೇಳಿದ್ದಾನೆ. ನಂತರ ಹಂತ ಹಂತವಾಗಿ 2.5 ಕೋಟಿ ರೂ ಪಡೆದು ವಂಚನೆ ಮಾಡಿದ್ದಾನೆ. ಘಟನೆ ಕುರಿತು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ನಕಲಿ ಐಪಿಎಸ್ ಅಧಿಕಾರಿ ಶ್ರೀನಿವಾಸ್ ವಿರುದ್ದ ಕೇಸ್ ದಾಖಲಾಗಿದೆ.
Join The Telegram | Join The WhatsApp |