ಹೆಬ್ರಿ : ಹೆಬ್ರಿಯ ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪುನಶ್ಚೇತನ ಕಾರ್ಯಕ್ರಮದಲ್ಲಿ ಶಿಕ್ಷಕ ಅಶೋಕ್ ಹೆಸ್ಕುತ್ತೂರ್ ಭಾಗವಹಿಸಿ ಸ್ಮರಣ ಶಕ್ತಿಯ ಬಗ್ಗೆ ಉಪನ್ಯಾಸ ನೀಡಿದರು.ಸಾಧಿಸುವ ಮನಸಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಕೇಳಿಸಿಕೊಳ್ಳುವುದು ಮತ್ತು ಆಲಿಸಿಕೊಳ್ಳುವುದರ ನಡುವೆ ವ್ಯತ್ಯಾಸ ವಿದೆ. ವಿದ್ಯಾರ್ಥಿಗಳು ವಿಷಯವನ್ನು ಸ್ಪಷ್ಟವಾಗಿ ಸ್ವೀಕರಿಸಬೇಕು. ಪ್ರಶ್ನೆಗೆ ಉತ್ತರಿಸುವ ಕಲೆಯನ್ನು ಕಲಿತಿರಬೇಕು. ಓದುವುದನ್ನು ಒಂದು ಹವ್ಯಾಸವಾಗಿಸಿಕೊಳ್ಳಬೇಕು ಎಂದರು.ಪ್ರಾಚಾರ್ಯ ಅಮರೇಶ್ ಹೆಗ್ಡೆ, ಪಿಆರ್ ಓ ವಿಜಯ್ ಕುಮಾರ್ ಶೆಟ್ಟಿ, , ಉಪನ್ಯಾಸಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಸುಹಾಸ್ ಶೆಟ್ಟಿ ನಿರೂಪಿಸಿ, ವಂದಿಸಿದರು.