ಬೆಳಗಾವಿ : ಬೆಳಗಾವಿ ತಾಲೂಕು ವಂಟಮುರಿ ಗ್ರಾಮದ ಬಳಿ ಹರಿಯುತ್ತಿರುವ ಘಟಪ್ರಭಾ ನದಿಗೆ ಗುರುವಾರ ಚಾಲಕನ ನಿಯಂತ್ರಣ ತಪ್ಪಿ ಲಾರಿ ಉರುಳಿ ಬಿದ್ದಿದೆ. ಲಾರಿ ಚಾಲಕ ಈಜಿ ದಡ ಸೇರಿದ್ದಾನೆ. ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿ ಮತ್ತು ರಸ್ತೆಗೆ ತಡೆಗೋಡೆ ನಿರ್ಮಾಣ ಮಾಡದೇ ಇರುವುದರಿಂದ ಲಾರಿ ಅಪಘಾತಕ್ಕೀಡಾಗಿದೆ. ಜೆಸಿಬಿ ಸಹಾಯದಿಂದ ಲಾರಿಯನ್ನು ಮೇಲಕ್ಕೆ ಎತ್ತುವ ಕಾರ್ಯಾಚರಣೆ ನಡೆದಿದೆ.