ಬೆಳಗಾವಿ : ಇಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಸದಸ್ಯ ಜಗದೀಶ್ ಶೆಟ್ಟರ್ ಅವರ ಬೆಳಗಾವಿಯ ಕಿತ್ತೂರು ಚನ್ನಮ್ಮ ಸರ್ಕಲ್ ಹತ್ತಿರವಿರುವ ಕಾಡಾ ಕಚೇರಿಯ 1ನೇ ಮಹಡಿಯಲ್ಲಿ ನೂತನ “ಸಂಸದರ ಕಚೇರಿ” ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.

ಈ‌ ಸಂದರ್ಭದಲ್ಲಿ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ರಮೇಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ, ಮಾಜಿ ಸಂಸದೆ ಮಂಗಲಾ ಅಂಗಡಿ, ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಹಾಪೌರ ಸವಿತಾ ಕಾಂಬಳೆ, ಮಾಜಿ ಶಾಸಕರಾದ ಅನಿಲ ಬೆನಕೆ, ಸಂಜಯ ಪಾಟೀಲ, ಜಗದೀಶ ಮಟಗುಡ್, ವಿಶ್ವನಾಥ ಪಾಟೀಲ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು, ಪಕ್ಷದ ಪದಾಧಿಕಾರಿಗಳು, ನಗರಸೇವಕರು ಉಪಸ್ಥಿತರಿದ್ದರು.