ಬೆಳಗಾವಿ : ಕೆಎಲ್ಇ ಸಂಸ್ಥೆಯ ಬಿ.ವಿ. ಕಾನೂನು ಮಹಾವಿದ್ಯಾಲಯದಲ್ಲಿ ಶುಕ್ರವಾರ ವಿಶ್ವ ಮಾನಸಿಕ ಆರೋಗ್ಯ ದಿನದ ಅಂಗವಾಗಿ ಕೆಎಲ್ಇ ಸಂಸ್ಥೆಯ ಜೆಎನ್ಎಂಸಿ ಸಹಾಯಕ ಪ್ರಾಧ್ಯಾಪಕ ಡಾ.ವಿಶ್ವಾಸ ಯಾದವಾಡ ಅವರಿಂದ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ಜೊತೆಗೆ, ಮಾನಸಿಕ ಆರೋಗ್ಯವನ್ನು ಸದೃಢಗೊಳಿಸಿಕೊಳ್ಳುವ ವಿಧಾನಗಳನ್ನು ಅವರು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಸಿದರು.

ಪ್ರಾಚಾರ್ಯೆ ಜ್ಯೋತಿ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಪ್ರಾಧ್ಯಾಪಕ ಸಂತೋಷ ಪಾಟೀಲ ಕಾರ್ಯಕ್ರಮ ಆಯೋಜಿಸಿದ್ದರು. ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.