ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಇದೀಗ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ. ಅವರು ಯಾರು ಬೇಕೋ ಅವರಿಗೆ ಟಿಕೆಟ್ ಘೋಷಣೆ ಮಾಡಲಿ. ಕೇಂದ್ರ ಸಚಿವ ಅಮಿತ್ ಶಾ ಈ ಬಗ್ಗೆ ತಿಳಿಸಿದ್ದಾರೆ. ಚನ್ನಪಟ್ಟಣಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಿಸಲಿ ಎಂದು ಹೇಳಿದ್ದಾರೆ.

ಉಪಚುನಾವಣೆಯ ಮೂರೂ ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಕೆಲಸ ಮಾಡಲಿದ್ದು ಮೂರು ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸವಿದೆ ಎಂದರು.

ಬಹುತೇಕ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ ಕ್ಷೇತ್ರ ಒಲವು ಸಾಧ್ಯತೆ ಹೆಚ್ಚಿದೆ. ಈ ನಡುವೆ ಎನ್ ಡಿ ಎ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಆಕಾಂಕ್ಷೆ ವ್ಯಕ್ತಪಡಿಸಿರುವ ಸಿ.ಪಿ. ಯೋಗೇಶ್ವರ್ ಅವರು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ಖಚಿತ.