ಬೆಳಗಾವಿ: ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮರಣೋತ್ಸವ ಸಮಿತಿ ವತಿಯಿಂದ ಅಕ್ಟೋಬರ್ 21ರಂದು ನೀಡಿದ್ದ ಬೈಲಹೊಂಗಲ ಬಂದ್ ಕರೆಯನ್ನು ಕೊನೆಗೂ ಹಿಂಪಡೆಯಲಾಗಿದೆ.

ಬೈಲಹೊಂಗಲ ಎಸಿ ಕಾರ್ಯಾಲಯದಲ್ಲಿ ಭಾನುವಾರ ನಡೆದ ತುರ್ತು ಸಭೆಯಲ್ಲಿ ಬಂದ್ ಕರೆಯನ್ನು ವಾಪಸ್ ಪಡೆಯಲಾಗಿದೆ. ಬೈಲಹೊಂಗಲ ಚನ್ನಮ್ಮನ ಸಮಾಧಿ ಸ್ಥಳದಲ್ಲಿ ಚನ್ನಮ್ಮನ 200ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ನಡೆಸಬೇಕು. ಫೆಬ್ರವರಿ ಎರಡರಂದು ಸರಕಾರದಿಂದ ಚನ್ನಮನ ಸ್ಮರಣೋತ್ಸವ ನಡೆಸಬೇಕು ಎಂದು ಸಮಿತಿ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸದೆ ಇದ್ದರಿಂದ ಬೈಲಹೊಂಗಲ ಬಂದ್ ಕರೆ ನೀಡಲಾಗಿತ್ತು. ಆದರೆ ಇದೀಗ ಮನವಿಗೆ ಸ್ಪಂದನೆ ಸಿಕ್ಕಿದ್ದರಿಂದ ಶಾಸಕರು, ಅಧಿಕಾರಿಗಳ ಭರವಸೆ ಮೇರೆಗೆ ಬೈಲಹೊಂಗಲ ಬಂದ್ ಕರೆ ವಾಪಸ್ ಪಡೆಯಲಾಗಿದೆ.

ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಹೋರಾಟಗಾರರ ಬೇಡಿಕೆಯಂತೆ ರಾಜ್ಯ ಸರಕಾರದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.