ಬೆಳಗಾವಿ : ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೊಬ್ಬನನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿದ್ದು ಈ ಎಲ್ಲರನ್ನು ಪೊಲೀಸ್ ಕಸ್ಟಡಿಗೆ ನಾಲ್ಕು ದಿನಗಳ ಕಾಲ ಒಪ್ಪಿಸಲಾಗಿದೆ. ಮಂಜುನಾಥ ತೇರ್ಕಲ್ ಎಂಬವನನ್ನು ಸೋಮವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಸರಿತಾ ಉರ್ಫ್ ಉಮಾ, ಇತರ ಆರೋಪಿಗಳಾದ ಶನಿವಾರ ಸಂತೆಯ ಶೋಭಿತ್ ಗೌಡ, ಪವನ್ ಮತ್ತು ಮಂಜುನಾಥ ಅವರನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ. ಮಂಗಳವಾರ ಎರಡನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಇವರಿಗೆ ನಾಲ್ಕು ದಿನಗಳ ಕಾಲ ಪೊಲೀಸ್ ವಶಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಪಂಕಜಾ ಕೊಣ್ಣೂರ ಆದೇಶಿಸಿದರು.