ಬಾಗಲಕೋಟೆ : ಇದು ಜಿಲ್ಲೆಯ ಲೋಕಾಪುರದಲ್ಲಿ ನಡೆದಿರುವ ಘಟನೆ. ವಿಷಯವೇನೆಂದರೆ, ಮೂವರು ಮಹಿಳೆಯರು ಒಂದೇ ಆಧಾರ್​ ಕಾರ್ಡ್​ ಬಳಸಿ ಕೆಎಸ್ಸಾರ್ಟಿಸಿ ಬಸ್ಸಲ್ಲಿ ಪ್ರಯಾಣ ಮಾಡುವಾಗ ಟಿಕೆಟ್ ಚೆಕ್ ಮಾಡುವ ಅಧಿಕಾರಿಯ ಕೈಯಲ್ಲಿ ಸಿಕ್ಹಾಕಿಕೊಂಡಿದ್ದಾರೆ. ಐದೈದು ನೂರು ರೂ ದಂಡ ಕಟ್ಟಿ ಇಲ್ಲದಿದ್ದರೆ ಪೊಲೀಸ್ ಸ್ಟೇಷನ್ ಗೆ ನಡೆಯಿರಿ ಎಂದು ಅಧಿಕಾರಿ ಹೇಳುತ್ತಿದ್ದಾರೆ. ನಮ್ಮಲ್ಲಿ ಅಷ್ಟೆಲ್ಲ ಹಣವಿಲ್ಲ ದಯವಿಟ್ಟು ಬಿಟ್ಟುಬಿಡಿ ಎಂದು ಮಹಿಳೆಯರು ಗೋಗರೆಯುತ್ತಿದ್ದಾರೆ. ಮಹಿಳೆಯರನ್ನು ಬಸ್ಸಿಂದ ಕೆಳಗಿಳಿಸಿದರೆಂಬ ಮಾಹಿತಿ ಇದೆ. ಸರ್ಕಾರದ ಗ್ಯಾರಂಟಿ ಯೋಜನೆಗಳು ದುರುಪಯೋಗುವಾಗುತ್ತಿರೋದು, ಜನ ದುರ್ಬಳಕೆ ಮಾಡಿಕೊಳ್ಳುತ್ತಿರೋದು ಹೊಸತೇನಲ್ಲ. ಶಕ್ತಿ ಯೋಜನೆಯಡಿ ಮಹಿಳೆಯರು ಬಸ್ಸಲ್ಲಿ ಉಚಿತವಾಗಿ ಪ್ರಯಾಣಿಸಬೇಕಾದರೆ ಗುರುತಿನ ಚೀಟಿಯಾಗಿ ಆಧಾರ್ ಕಾರ್ಡ್ ಕಂಡಕ್ಟರ್ ಗೆ ತೋರಿಸಿದರೆ ಸಾಕು, ಈ ಮಹಿಳೆಯರಲ್ಲಿ ಅದೂ ಕೂಡ ಇಲ್ಲ ಅಂದರೆ ಹೇಗೆ ಸ್ವಾಮಿ.