ಬಳ್ಳಾರಿ: ಅತ್ಯಂತ ಮಹತ್ವದ ವಿದ್ಯಮಾನವೊಂದರಲ್ಲಿ ಮಂಗಳವಾರ ರಾತ್ರಿ ಖ್ಯಾತ ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿನಿಂದ ಚಿಕಿತದಸೆ್ಎ ವಿಮ್ಸ್ ಗೆ ರವಾನಿಸಲಾಗಿದೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಮುಖ್ಯ ಆರೋಪಿಯಾಗಿರುವ ದರ್ಶನ್ ಕಳೆದೊಂದು ತಿಂಗಳಿನಿಂದ ಬಳ್ಳಾರಿ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ. ಆರೋಗ್ಯ ಸಮಸ್ಯೆ ಕಾರಣದಿಂದ ಬೆಂಗಳೂರಿಗೆ ತಮ್ಮನ್ನು ವರ್ಗಾಯಿಸುವಂತೆ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ಇದೀಗ ದರ್ಶನ್ ಅವರನ್ನು ಪೊಲೀಸರು ರಾತ್ರೋರಾತ್ರಿ ಆಂಬ್ಯುಲೆನ್ಸ್ ಮೂಲಕ ವಿಮ್ಸ್ ಗೆ ಕರೆದುಕೊಂಡು ಹೋಗಿದ್ದಾರೆ. ದರ್ಶನ್ ಅವರಿಗೆ ಬೆನ್ನು ನೋವು ಕಾಡುತ್ತಿದೆ. ಈ ನಿಟ್ಟಿನಲ್ಲಿ ಅವರಿಗೆ ವಿಮ್ಸ್ ಗೆ ಕರೆದುಕೊಂಡು ಹೋಗಿ ಸ್ಕ್ಯಾನಿಂಗ್ ನಡೆಸಿ ಗುಣಪಡಿಸುವ ಬಗ್ಗೆ ವದಂತಿ ಹರಡಿದೆ. ಒಟ್ಟಾರೆ ಹಗಲಿನಲ್ಲಿ ಕರೆದುಕೊಂಡು ಹೋದರೆ ಭದ್ರತಾ ಸಮಸ್ಯೆ ಎದುರಾಗಬಹುದು ಎಂಬ ಕಾರಣಕ್ಕೆ ಹಾಗೂ ಅಪಾರ ಸಂಖ್ಯೆಯ ಬೆಂಬಲಿಗರು ಅವರನ್ನು ಭೇಟಿಯಾಗುವ ಕಾರಣಕ್ಕೆ ಪೊಲೀಸರು ಈಗ ತಡರಾತ್ರಿ ಕರೆದುಕೊಂಡು ಹೋಗಿದ್ದಾರೆ.