ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಇದೀಗ ಸ್ಪರ್ಧಾಳುಗಳು ಯಾರು ಎನ್ನುವುದು ಬಹುತೇಕ ಖಚಿತವಾದಂತಿದೆ. ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್, ಸಮಾಜವಾದಿ ಪಕ್ಷದ ಮೂಲಕ ತಮ್ಮ ರಾಜಕೀಯ ಏಳು ಬೀಳುಗಳನ್ನು ಕಂಡಿರುವ ಯೋಗೇಶ್ವರ್ ಕನ್ನಡದ ಖ್ಯಾತ ಚಲನಚಿತ್ರ ನಟ ಉತ್ತರ ದ್ರವದಿಂ ದಕ್ಷಿಣ ಧೃವಕೂ, ಸೈನಿಕ, ಬದ್ರಿ, ಪ್ರೀತಿ ನೀ ಇಲ್ಲದೆ ನಾ ಹೇಗಿರಲಿ, ಪಾಂಚಾಲಿ, ಶಿವಪ್ಪ ನಾಯಕ ಚಿತ್ರಗಳಲ್ಲಿ ನಾಯಕ ನಟರಾಗಿ ನಟಿಸಿ ಜನಪ್ರೀತಿ ಗಳಿಸಿದ್ದರು. ಅತ್ಯಂತ ವರ್ಚಸ್ಸು ಹೊಂದಿರುವ ರಾಜಕಾರಣಿಯಾಗಿ ಅವರು ಜನಮಾನಸದಲ್ಲಿ ಗುರೂಜಿಸಿಕೊಂಡಿದ್ದಾರೆ.

ಅವರಿಗೆ ಎದುರಾಳಿಯಾಗಿ ಇದೀಗ ಎನ್ ಡಿಎ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾದಂತಿದೆ. ಕನ್ನಡ ಮತ್ತು ತೆಲುಗು ಚಲನಚಿತ್ರದಲ್ಲಿ ನಾಯಕ ನಟನಾಗಿ ನಟಿಸಿರುವ ನಿಖಿಲ್ ಕುಮಾರಸ್ವಾಮಿ ಅವರು ಈಗ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರು. ಜಾಗ್ವಾರ್ ಎಂಬ ತೆಲುಗು, ಸೀತಾರಾಮ ಕಲ್ಯಾಣ, ಕುರುಕ್ಷೇತದರ, ಯದುವೀರ ಎಂಬ ಕನ್ನಡ ಚಲನಚಿತ್ರದಲ್ಲೂ ನಟಿಸಿದ್ದಾರೆ. ಈ ಹಿಂದೆ ಮಂಡ್ಯ ಲೋಕಸಭಾ ಮತ್ತು ರಾಮನಗರ ವಿಧಾನಸಭಾ ಚುನಾವಣೆಗಳಲ್ಲಿ ಸೋಲು ಅನುಭವಿಸಿದ್ದರು. ಇದೀಗ ಬಿಜೆಪಿ ಬೆಂಬಲ ಪಡೆದುಕೊಂಡಿರುವ ಅವರು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ.