ಬೆಂಗಳೂರು : ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ಆರೋಗ್ಯ ಹದಗೆಟ್ಟಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬುಧವಾರದಂದು ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಸಭೆ ನಡೆಸಬೇಕಾಗಿತ್ತು.. ಆದರೆ ತಮ್ಮ ತಾಯಿಯವರ ಅನಾರೋಗ್ಯ ಹಿನ್ನೆಲೆಯಲ್ಲಿ ಸಭೆಯನ್ನು ಸಹ ರದ್ದುಗೊಳಿಸಿದ್ದಾರೆ. ಚನ್ನಮ್ಮ ಅವರ ಉಸಿರಾಟದಲ್ಲಿ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.