ಹೆಬ್ರಿ : ಅಮೃತ ಭಾರತಿ ವಿದ್ಯಾ ಕೇಂದ್ರ ಸಿಬಿಎಸ್ ಸಿ 10 ನೇ ತರಗತಿಯ ವಿದ್ಯಾರ್ಥಿ ಶ್ರೀರಾಮ್ ಬಡಜೆ, ಮಂಗಳೂರಿನಲ್ಲಿ ನಡೆದ ಕ್ಷೇತ್ರಮಟ್ಟದ ಇನ್ನೋವೇಟಿವ್ ಗಣಿತ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವನ್ನು ಪಡೆದು ಓಡಿಸ್ಸಾ ದಲ್ಲಿ ನಡೆಯುವ ವಿದ್ಯಾ ಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನದ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಅಮೃತ ಭಾರತಿ ಟ್ರಸ್ಟ್ ನ ಎಲ್ಲಾ ಪದಾಧಿಕಾರಿಗಳು,ಮುಖ್ಯ ಶಿಕ್ಷಕರು,ಬೋಧಕ ಮತ್ತು ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.