| Latest Version 9.0.7 |

State News

ಯೋಗಾಸನ ಸ್ಪರ್ಧೆ : ಕಾರ್ಕಳ ಜ್ಞಾನಸುಧಾದ ಮೂವರು ರಾಜ್ಯಮಟ್ಟಕ್ಕೆ

ಗಣಿತನಗರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ವಿದ್ಯೋದಯ ಪದವಿ ಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್ ಸೋಲೊ ವಿಭಾಗದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿಯ ಪೂರ್ವಜ್ ಗೌಡ ವಿ ಹಾಗೂ ದೃತಿ.ಡಿ.ಎಲ್, ರಿದಮಿಕ್ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ವಿಶ್ರುತ್‌ರಾಜ್ ಟಿ.ಬಿ ಹಾಗೂ ಪೂರ್ವಜ್ ಗೌಡ ವಿ ಅತ್ಯುತ್ತಮ ಪ್ರದರ್ಶನ ನೀಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ ಅಧ್ಯಕ್ಷ ಡಾ, ಸುಧಾಕರ ಶೆಟ್ಟಿ ಅಭಿನಂದಿಸಿದ್ದಾರೆ.

Team Udayaprabha
";