| Latest Version 9.0.7 |

National News

ಪ್ರಪಾತಕ್ಕೆ ಬಿದ್ದ ಕಾರು: 8 ಯುವಕರ ಸಾವು

 

 

ರಾಯಗಢ, ಮಹಾರಾಷ್ಟ್ರ: ಎಸ್‌ಯುವಿ ಕಾರೊಂದು

ಸುಮಾರು 1 ಸಾವಿರ ಅಡಿ ಆಳದ ಕಣಿವೆಗೆ ಬಿದ್ದು 8 ಯುವಕರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಿನ್ನೆ ನಡೆದಿದೆ.

 

ಮೃತರು ಮಹಾರಾಷ್ಟ್ರದ ಸತಾರ ಹಾಗೂ ರತ್ನಗಿರಿ ನಗರದವರು ಎಂದು ತಿಳಿದು ಬಂದಿದೆ.

 

ಪೋಳಾದಪುರ್-ಮಹಾಬಲೇಶ್ವರ ರಸ್ತೆಯ ಅಂಬೇನಾಳಿ ಘಾಟ್ ಬಳಿ ಈ ದುರಂತ ಭಾನುವಾರ ಬೆಳಗಿನ ಜಾವ ಸಂಭವಿಸಿದೆ ಎಂದು ರಾಯಗಢ ಎಸ್‌ಪಿ ತಿಳಿಸಿದ್ದಾರೆ.

 

ಅಂಬೇನಾಳಿ ಘಾಟ್ ಬಳಿ ಕಡಿದಾದ ರಸ್ತೆಯ ತಿರುವಿನಲ್ಲಿ ಕಾರು ಹೋಗುತ್ತಿರುವಾಗ ಆಳವಾದ ಕಣಿವೆಗೆ ನಿಯಂತ್ರಣ ತಪ್ಪಿ ಬಿದ್ದಿದೆ. ಆ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸಹ ಸಿಗದಿದ್ದರಿಂದ ತುರ್ತು ಸಹಾಯ ಸಾಧ್ಯವಾಗಿರಲಿಲ್ಲ. ಇದರಿಂದ ಮೃತರ ಕುಟುಂಬದವರು ಆತಂಕಗೊಂಡು ತಮ್ಮವರು ಸಂಪರ್ಕಕಕ್ಕೆ ಸಿಗುತ್ತಿಲ್ಲ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

 

ಮಾಹಿತಿ ತಿಳಿದು ಪೊಲೀಸರು ಕಾರ್ಯಾಚರಣೆ ಕೈಗೊಂಡಾಗ ಭೀಕರ ಅಪಘಾತ ಸಂಭವಿಸಿರುವುದು ಕಂಡು ಬಂದಿದೆ.

Team Udayaprabha
";