ನವದೆಹಲಿ: ಭಾರತೀಯ ಕ್ರಿಕೆಟ್ ಕಂಡ ಅತ್ಯಂತ ಪ್ರಮುಖ ಬ್ಯಾಟ್ಸ್ಮನ್ಗಳಲ್ಲಿ ಒಬ್ಬರಾದ ಅಜಿಂಕ್ಯ ರಹಾನೆ ಎಲ್ಲಾ ಮಾದರಿಯ ಕ್ರಿಕೆಟ್ಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ.
ಬ್ಯಾಟಿಂಗ್ ಮಾತ್ರವಲ್ಲದೆ, ಸ್ಲಿಪ್ನಲ್ಲಿ ಅವರು ತೋರುತ್ತಿದ್ದ ಕ್ಯಾಚಿಂಗ್ ಕೌಶಲ ತಂಡದ ಗೆಲುವಿನ ಬಲವನ್ನು ಹೆಚ್ಚಿಸಿತ್ತು. ತಾಳ್ಮೆ, ಒತ್ತಡದ ಸಂದರ್ಭದಲ್ಲಿ ಸಂಯಮ, ತಮ್ಮ ನಾಯಕತ್ವ ಗುಣ ಮತ್ತು ನಿಸ್ವಾರ್ಥ ಆಟದ ಮೂಲಕ ರಹಾನೆ ಭಾರತೀಯ ಕ್ರಿಕೆಟ್ನಲ್ಲಿ ಅಳಿಸಲಾಗದ ಛಾಪನ್ನು ಮೂಡಿಸಿದ್ದಾರೆ.
ಒಂದು ದಶಕ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ರಹಾನೆ, ತಮ್ಮ ಬ್ಯಾಟಿಂಗ್ ತಂತ್ರ, ಮೈದಾನದಲ್ಲಿ ಸಂಯಮ ಮತ್ತು ವಿದೇಶಿ ನೆಲದಲ್ಲಿ ಉತ್ತಮ ಪ್ರದರ್ಶನದಿಂದ ಗಮನ ಸೆಳೆದಿದ್ದರು. ಭಾರತದ ಪರ 85 ಟೆಸ್ಟ್, 90 ಏಕದಿನ ಮತ್ತು 20 ಟಿ-20 ಪಂದ್ಯಗಳನ್ನು ಆಡಿರುವ ಅವರು, ಎಲ್ಲಾ ಮಾದರಿಗಳಿಂದ ಒಟ್ಟು 8,000ಕ್ಕೂ ಅಧಿಕ ರನ್ಗಳನ್ನು ಕಲೆಹಾಕಿದ್ದಾರೆ.
ರಹಾನೆ ಅವರ ಕ್ರಿಕೆಟ್ ವೃತ್ತಿ ಜೀವನದಲ್ಲಿ ಅತ್ಯಂತ ಸ್ಮರಣೀಯ ಕ್ಷಣವೆಂದರೆ 2020-21ರ ಆಸ್ಟ್ರೇಲಿಯಾ ಪ್ರವಾಸದ ಬಾರ್ಡರ್-ಗವಾಸ್ಕರ್ ಟ್ರೋಫಿ. ಪ್ರಮುಖ ಆಟಗಾರರ ಗಾಯದ ಸಮಸ್ಯೆಯಿಂದ ಕಂಗೆಟ್ಟಿದ್ದ ಯುವ ಭಾರತೀಯ ತಂಡವನ್ನು ಮುನ್ನಡೆಸಿದ ರಹಾನೆ, ಅಲ್ಲಿ ಶತಕ ಸಿಡಿಸುವುದರೊಂದಿಗೆ ತಂಡವನ್ನು ಐತಿಹಾಸಿಕ ಟೆಸ್ಟ್ ಸರಣಿ ಗೆಲುವಿನತ್ತ ಮುನ್ನಡೆಸಿದ್ದರು.


,
,


















