ಕಾಗವಾಡ : ಸಿರಗುಪ್ಪಿ- ಕಾಗವಾಡ ರಸ್ತೆಯಲ್ಲಿ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವರು ಗಂಭೀರ ಗಾಯಗೊಂಡಿದ್ದು ಮೀರಜ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಂಗ್ಲಿ ಜಿಲ್ಲೆಯ ತಾಸಗಾಂವ ತಾಲೂಕಿನ ಉಮೇಶ್ ಕಾಳೆ (46)ಮೃತಪಟ್ಟವರು. ಬೆಳಗಾವಿಯಿಂದ ಮಹಾರಾಷ್ಟ್ರದ ತೆರಳುತ್ತಿದ್ದ ಕಾರು ಅಪಘಾತಕ್ಕೆ ತುತ್ತಾಗಿ ಈ ದುರ್ಘಟನೆ ಸಂಭವಿಸಿದೆ.