ವಿಜಯಪುರ :
ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ 1 ಸಾವಿರ ಎಕರೆ ಪ್ರದೇಶದಲ್ಲಿ ಅರಣ್ಯ ನಿರ್ಮಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಲ್ಲಿ ಮಕ್ಕಳಿಗೆ ಪರಿಸರದ ಬಗೆಗೆ ಅರಿವು ಮೂಡಿಸಲು ವಿಜ್ಞಾನ ಮತ್ತು ಧ್ಯಾನ ಕೇಂದ್ರ, ತಾರಾಲಯ ಸ್ಥಾಪಿಸಲು ಸ್ಥಳ ಗುರುತಿಸಬೇಕು. ಭೂತನಾಳ ಮತ್ತು ಬಾಬಾನಗರ ಬಳಿ 200 ಹೆಕ್ಟೇ‌ರ್ ಪ್ರದೇಶವನ್ನು ಅರಣೀಕರಣಕ್ಕೆ ಗುರುತಿಸಲು ಹಾಗೂ ಈ ಪ್ರದೇಶದಲ್ಲಿ ಕಾಡು ಬೆಳೆಸುವ ಕುರಿತು ಸಮಗ್ರ ಯೋಜನೆ ರೂಪಿಸಬೇಕು ಎಂದು ಸೂಚಿಸಿದರು.