ಬೆಳಗಾವಿ : ಕರ್ನಾಟಕ ಮತ್ತು ಗೋವಾ ಗಡಿಭಾಗದ ದೂದಸಾಗರ ಹಾಗೂ ಸೊನೌಲಿ ನಡುವೆ ಭೂಕುಸಿತ ಸಂಭವಿಸಿದೆ. ಇದರಿಂದ ನೈರುತ್ಯ ರೈಲ್ವೆಯ 5 ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ ಎಂದು ಅಧಿಕಾರಗಳು ತಿಳಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಲೋಂಡಾ ಹಾಗೂ ತಿನೈಘಾಟ್ ನಡುವೆ ಹಳಿಗೆ ಮರ ಬಿದ್ದಿದೆ. ಓವರ್ ಹೆಡ್ ವಿದ್ಯುತ್ ಪೂರೈಕೆಗೆ ಇದರಿಂದ ತೊಂದರೆ ಉಂಟಾಗಿದೆ. ಗುರುವಾರ ಮಧ್ಯರಾತ್ರಿ 12:55ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಹಳಿಯ ಮೇಲೆ ಬಿದ್ದಿರುವ ಮಣ್ಣು ಹಾಗೂ ಮರವನ್ನು ಕೂಡಲೇ ತೆರವುಗೊಳಿಸಲಾಗಿದೆ. ಶುಕ್ರವಾರ ಬೆಳಗ್ಗೆ 6 ಗಂಟೆ ನಂತರ ರೈಲು ಸಂಚಾರ ಆರಂಭವಾಗಿದೆ ಎಂದು ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಂಜುನಾಥ ಕನಮಾಡಿ ಮಾಹಿತಿ ನೀಡಿದ್ದಾರೆ.