ಬೆಳಗಾವಿ : ಶೌಚಕ್ಕೆ ಹೋದ ವೇಳೆ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದಿದೆ.

ಶಿವರಾಯ ಮಲ್ಲಪ್ಪ ಕಾಂಬಳೆ (21) ಮೃತ ದುರ್ದೈವಿ. ಹಲ್ಯಾಳ ಕರಿಮಸೂತಿ ಏತ ನೀರಾವರಿ ಕಾಲುವೆಯಲ್ಲಿ ಬಳಿ ಇಬ್ಬರು ಸ್ನೇಹಿತರ ಜೊತೆಗೆ ಮುಂಜಾನೆ ಶೌಚಕ್ಕೆ ತೆರಳಿದ್ದ ಮೃತ ಯುವಕ. ಕಾಲುವೆ ಮೇಲೆ ಶೌಚ ಬಳಿಕ ಕಾಲುವೆಗೆ ಇಳಿದು ನೀರು ತರಲು ಮುಂದಾಗಿದ್ದ ಯುವಕ. ಈ ವೇಳೆ ಕಾಲು ಜಾರಿ ಕಾಲುವೆ ಬಿದ್ದಿದ್ದಾನೆ. ಈಜು ಬಾರದ ಶಿವರಾಯ ಕಾಲುವೆ ಬೀಳುತ್ತಿದ್ದಂತೆಯೇ ರಭಸವಾಗಿ ಹರಿಯುತ್ತಿದ್ದ ಕಾಲುವೆಯಲ್ಲಿ ಕೊಚ್ಚಿಹೋಗಿದ್ದಾನೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಥಣಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಶೋಧಕಾರ್ಯದ ಬಳಿಕ ಘಟನೆ ನಡೆದ ಸ್ಥಳದಿಂದ ಒಂದು ಕಿಮೀ ಅಂತರದಲ್ಲಿ ಮೃತದೇಹ ಪತ್ತೆಯಾಗಿದೆ.. ಮೃತದೇಹ ಪತ್ತೆಯಾಗುತ್ತಿದ್ದಂತೆ ಪೋಷಕರ ಅಕ್ರಂದನ ಮುಗಿಲು ಮುಟ್ಟಿತು. ಸದ್ಯ ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.