
ಕುಂದಾಪುರ : ನಿನ್ನೆಯಿಂದ ಹೊಸಂಗಡಿ, ಸಿದ್ದಾಪುರ ಭಾಗದಲ್ಲಿ ಕಾಡಾನೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಇಂದು ದಿನಾಂಕ 04/06/2025 ರಂದು ನಡೆಯಬೇಕಿದ್ದ ಸಿದ್ದಾಪುರ ಸಂತೆಯನ್ನು ರದ್ದುಪಡಿಸಲಾಗಿದೆ. ಸಿದ್ದಾಪುರ ಹೊಸಂಗಡಿ ಮತ್ತು ಕಮಲಶಿಲೆ ಗ್ರಾಮಗಳ ವ್ಯಾಪ್ತಿಯ ಎಲ್ಲ ಅಂಗನವಾಡಿ ಕೇಂದ್ರಗಳು, ಶಾಲೆಗಳು ಮತ್ತು ಪ್ರೌಢಶಾಲಾ ವಿಭಾಗಕ್ಕೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಸಾರ್ವಜನಿಕರು ಭಯಭೀತರಾಗದೆ ಜಾಗರೂಕತೆಯಿಂದ ಓಡಾಡಬೇಕು ಎಂದು ತಾಲೂಕು ಆಡಳಿತ ಪ್ರಕಟಣೆ ನೀಡಿದೆ.