ಪುತ್ತೂರು: ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ(ಪೂಡಾ) ನೂತನ ಅಧ್ಯಕ್ಷರಾಗಿ ಕೆಪಿಸಿಸಿ ವಕ್ತಾರ, ಮಾನವಬಂಧುತ್ವ ವೇದಿಕೆಯ ಪುತ್ತೂರು ಘಟಕದ ಸಂಚಾಲಕ ಅಮಲ ರಾಮಚಂದ್ರ ಅವರನ್ನು ನೇಮಕ ಮಾಡಲಾಗಿದೆ.

ಭಾಸ್ಕರ ಗೌಡ ಕೋಡಿಂಬಾಳ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು. ಶಾಸಕ ಅಶೋಕ್‌ಕುಮಾ‌ರ್ ರೈ ಅವರ ಶಿಫಾರಸ್ಸು ಹಿನ್ನಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಲತಾ ಕೆ. ಅವರು ರಾಜ್ಯಪಾಲರ ಆಜ್ಞಾನುಸಾರ ಆದೇಶ ಹೊರಡಿಸಿದ್ದಾರೆ.

ಅಮಲ ರಾಮಚಂದ್ರ ಅವರು ಶನಿವಾರ ಬೆಳಿಗ್ಗೆ 10 ಗಂಟೆಗೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪ್ರಕಟಣೆ