ಬೆಳಗಾವಿ : ಬೆಳಗಾವಿಯಲ್ಲಿ ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು ಹಿಂದೂ ಯುವತಿಯರನ್ನು ಮಾತ್ರವಲ್ಲದೆ ವಿವಾಹಿತೆಯರನ್ನು ಲವ್ ಜಿಹಾದ್ ಜಾಲಕ್ಕೆ ತಳ್ಳಲು ಮುಂದಾಗಿರುವ ಘಟನೆ ಇದಾಗಿದೆ. ಕೆಲಸ ಕೊಡಿಸುವುದಾಗಿ ಹೇಳಿ ಬಳಸಿಕೊಂಡು ಮಹಿಳೆಯ ಮೇಲೆ ದೌರ್ಜನ್ಯ ಎಸಗಿ ಬಲವಂತವಾಗಿ ಮತಾಂತರ ಮಾಡಲು ಪ್ರಯತ್ನ ಪಟ್ಟ ಆರೋಪಿಗಳು ಇದೀಗ ಪೊಲೀಸರ ವಶವಾಗಿದ್ದಾರೆ. ಹಿಂದೂ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಮಹಿಳೆಯ ಖಾಸಗಿ ಫೋಟೋಗಳನ್ನು ಸೆರೆ ಹಿಡಿದು ಮತಾಂತರವಾಗುವಂತೆ ಬ್ಲಾಕ್ ಮೇಲ್ ಮಾಡಲಾಗಿದ್ದು ಪೊಲೀಸ್ ವಿಚಾರಣೆ ವೇಳೆ ಬಯಲಾಗಿದೆ. ಈ ಮತಾಂತರ ಪ್ರಯತ್ನದ ಜಾಲದಿಂದ ತಪ್ಪಿಸಿಕೊಂಡ ಸಂತ್ರಸ್ತೆ ಇದೀಗ ಏಳು ಜನ ಆರೋಪಿಗಳ ವಿರುದ್ಧ ಸವದತ್ತಿ ಪೊಲೀಸ್ ಠಾಣೆಗೆ ದೂರು ನೀಡಿದ್ದು ನ್ಯಾಯ ನೀಡುವಂತೆ ಅಂಗಲಾಚಿದ್ದಾಳೆ.

ಘಟನೆ ವಿವರ :
ಕಿರಾಣಿ ಅಂಗಡಿ ನಡೆಸುತ್ತಿದ್ದ ಹಿಂದೂ ಮಹಿಳೆಯನ್ನು ಪುಸಲಾಯಿಸಿ ಆಕೆಯೊಂದಿಗೆ ಪ್ರೀತಿಯ ನಾಟಕವಾಡಿ, ಲೈಂಗಿಕವಾಗಿ ಬಳಸಿಕೊಂಡು, ಅಶ್ಲೀಲ ವೀಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮತಾಂತರಕ್ಕೆ ಒತ್ತಾಯಿಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು ಮುಸ್ಲಿಂ ದಂಪತಿಯನ್ನು ಬಂಧಿಸಿದ್ದಾರೆ.

ಕಿರಾಣಿ ಅಂಗಡಿ ಇಟ್ಟುಕೊಂಡು ಜೀವನ ಮಾಡುತ್ತಿದ್ದ ಹಿಂದೂ ಮಹಿಳೆಯನ್ನು ಪುಸಲಾಯಿಸಿ ಪ್ರೀತಿ-ಪ್ರೇಮದ ನಾಟಕವಾಡಿ ಮತಾಂತರ ಮಾಡಲು ಮುಂದಾದ ಪ್ರಕರಣ ಬೆಳಕಿಗೆ ಬಂದಿದೆ. ಸವದತ್ತಿ ಠಾಣಾ ವ್ಯಾಪ್ತಿಯಲ್ಲಿ ಈ ಲವ್ ಜಿಹಾದ್ ಪ್ರಕರಣ ನಡೆದಿದೆ. ಹಿಂದೂ ಮಹಿಳೆಯನ್ನು ಮತಾಂತರ ಮಾಡಲು ಯತ್ನಿಸಿದ್ದ ಗಂಡ-ಹೆಂಡತಿ ಇಬ್ಬರನ್ನೂ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮತಾಂತರ ಮಾಡಲು ಯತ್ನಿಸಿದ ರಫೀಕ್ ಬೇಪಾರಿ ಹಾಗೂ ಆತನ ಪತ್ನಿ ಕೌಸರ್ ಬೇಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಈ ಬಗ್ಗೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾ ಶಂಕರ್ ಗುಳೇದ ಮಾಹಿತಿ ನೀಡಿದ್ದಾರೆ. ಸಂತ್ರಸ್ತ ಮಹಿಳೆಯಿಂದ ಒಟ್ಟು 7 ಜನರ ವಿರುದ್ಧ ಮತಾಂತರದ‌ ಆರೋಪ‌ ಮಾಡಿದ್ದಳು. ಸವದತ್ತಿ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಳು. ಮಹಿಳೆ ದೂರಿನನ್ವಯ ಸವದತ್ತಿ ಪೊಲೀಸರು ಮುಸ್ಲಿಂ ದಂಪತಿಯನ್ನು ಬಂಧನ ಮಾಡಿದ್ದಾರೆ. ಹಿಂದೂ ಮಹಿಳೆಯ ಖಾಸಗಿ ಕ್ಷಣದ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ಮತಾಂತರಕ್ಕೆ ಯತ್ನ ಮಾಡಲಾಗಿದೆ.

ಹಣೆಗೆ ಕುಂಕುಮ ಹಚ್ಚುವುದನ್ನು ನಿಲ್ಲಿಸಬೇಕು. ಹಿಂದೂ ಸಂಪ್ರದಾಯ ಬಿಡಬೇಕು. ನಿತ್ಯ ಬುರ್ಖಾ ಧರಿಸಬೇಕು. ದಿನಕ್ಕೆ 5 ಸಲ ನಮಾಜ್ ಮಾಡಬೇಕು ಎಂದು ರಫೀಕ್‌ ಬೇಪಾರಿ ಷರತ್ತು ಹಾಕಿದ್ದ. ಇದಕ್ಕೆ ರಫೀಕ್‌ನ ಹೆಂಡತಿ ಮತ್ತು ಅಕ್ಕಪಕ್ಕದ ಮನೆ ರಫೀಕ್ ನೀಡಿದ ಕಿರುಕುಳದ ಬಗ್ಗೆ ತನ್ನ ಪತಿಗೆ ಮಹಿಳೆ ಮಾಹಿತಿ ನೀಡಿದ್ದಳು. ಏ.18 ರಂದು ಸವದತ್ತಿ ಠಾಣೆಗೆ ದೂರು ನೀಡಲಾಗಿದೆ. ಆರೋಪಿಗಳಾದ ಮುನವಳ್ಳಿ ಪಟ್ಟಣದ ಆರೀಫ್ ‌ಬೇಪಾರಿ, ಆದೀಲ್, ಶೋಯಲ್, ಮುಕ್ತಮ್, ಕರೆವ್ವ ಕಟ್ಟಿಮನಿ ಹಾಗೂ ಕೌಸರ್ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಈಗ ಇಬ್ಬರನ್ನು ಬಂಧಿಸಿ, ಉಳಿದವರಿಗಾಗಿ ಬಲೆ ಬೀಸಲಾಗಿದೆ.

ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಗಂಡ ಕಿರಾಣಿ ಅಂಗಡಿ ಹೊಂದಿದ್ದ. ಪತಿ ಇಲ್ಲದಾಗ ಆಗಾಗ ಕಿರಾಣಿ ಅಂಗಡಿಯಲ್ಲಿ ಈ ಮಹಿಳೆ ಕೂರುತ್ತಿದ್ದಳು. ಆಗ ಆರೀಫ್ ಬೇಪಾರಿ ಅಲ್ಲಿಗೆ ಬಂದು ಮಹಿಳೆಯೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದ. ದಿನಗಳೆದಂತೆ ಮಹಿಳೆಯ ಸ್ನೇಹ ಬೆಳೆಸಿ ಮೊಬೈಲ್ ನಂಬರ್‌ ಪಡೆದುಕೊಂಡು ಸಂಪರ್ಕ ಇಟ್ಟುಕೊಂಡದ್ದಾನೆ. ನಂತರ, ಹಲವು ಆಮಿಷಗಳನ್ನೊಡ್ಡಿ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದಾನೆ.

ನಂತರ ಮಹಿಳೆಯನ್ನು ನಿನಗೆ ಬೆಳಗಾವಿಯಲ್ಲಿ ಆಫೀಸ್‌ನಲ್ಲಿ ಕುಳಿತು ಕೈತುಂಬಾ ದುಡಿಯುವ ಕೆಲಸ ಕೊಡಿಸುವುದಾಗಿ ಕರೆದುಕೊಂಡು ಹೋಗಿ ‌ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ಜೊತೆಗೆ, ಒಂದೆರಡು ಬಾರಿಗೆ ಕೆಲಸ ಸಿಕ್ಕಿಲ್ಲವೆಂದು ಹೇಳಿ ಹಲವು ಬಾರಿ ಬೆಳಗಾವಿಗೆ ಕರೆದುಕೊಂಡು ಬಂದು ಲೈಂಗಿಕವಾಗಿ ಬಳಸಿಕೊಂಡಿದ್ದು, ಅಂತಹ ಅಶ್ಲೀಲ ದೃಶ್ಯವನ್ನು ವಿಡಿಯೋ ಮಾಡಿಟ್ಟುಕೊಂಡಿದ್ದಾನೆ. ನಂತರ ತನ್ನೊಂದಿಗೆ ಐದು ಜನರನ್ನು ಕರೆದುಕೊಂಡು ಬಂದು ನೀನು ಮತಾಂತರಗೊಳ್ಳಬೇಕು. ಇಲ್ಲವಾದಲ್ಲಿ ನಿನ್ನ ಫೋಟೋ ವಿಡಿಯೋ ಸಾಮಾಜಿಕ ಜಾಲತಾಣಕ್ಕೆ ಹರಿಬಿಡುತ್ತೇನೆ ಎಂದು ಬೆದರಿಸಿದ್ದಾನೆ.