This is the title of the web page
This is the title of the web page

Live Stream

June 2023
S M T W T F S
 123
45678910
11121314151617
18192021222324
252627282930  

| Latest Version 9.4.1 |

State News

ಬೈಂದೂರು, ಕುಂದಾಪುರ ಜನತೆಗೆ ಮತ್ತೆ ನಿರಾಶೆ

Join The Telegram Join The WhatsApp

ಕುಂದಾಪುರ : 

ಕುಂದಾಪುರ ಹಾಗೂ ಬೈಂದೂರು ತಾಲೂಕು ಜನತೆಯ ಬಹುದಿನಗಳ ಬೇಡಿಕೆಗೆ ಸರಕಾರ ಮತ್ತೊಮ್ಮೆ ತಣ್ಣೀರೆರೆಚಿದೆ. ಈ ಭಾಗದಲ್ಲಿ ಹೊಸ ಆರ್‌ಟಿಒ ಕಚೇರಿ ಸ್ಥಾಪನೆ ಕನಸು ನುಚ್ಚುನೂರಾಗಿದೆ.

ರಾಜ್ಯದಲ್ಲಿ ಹೊಸದಾಗಿ ಆರ್‌ಟಿಒ ಕಚೇರಿ ಆರಂಬಿಸುವುದಿಲ್ಲ. ಬದಲಾಗಿ ಆನ್‌ಲೈನ್‌ ಸೇವೆಗಳನ್ನು ಜಿಲ್ಲಾ ಕೇಂದ್ರದಲ್ಲಿ ನೀಡಲು ಬೇಕಾದ ವ್ಯವಸ್ಥೆ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಬೆಳಗಾವಿ ಅಧಿವೇಶನದಲ್ಲಿ ಹೇಳಿದ್ದಾರೆ.

ಬಿಜೆಪಿಯ ಬಿ.ಎಂ.ಸುಕುಮಾರಶೆಟ್ಟಿ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಈ ಭಾಗದಲ್ಲಿ ಒಂದು ಆರ್‌ಟಿಒ ಕಚೇರಿ ಆರಂಭಿಸುವಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೊಸದಾಗಿ ಆರ್‌ಟಿಒ ಕಚೇರಿ ಆರಂಭಿಸಲು ಹಲವು ಶಾಸಕರು ಪ್ರಸ್ತಾವನೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇಲಾಖೆಯ ಆಯುಕ್ತರು ಹಾಗೂ ಕಾರ್ಯದರ್ಶಿಯವರ ನೇತೃತ್ವದಲ್ಲಿ ತಂಡ ರಚನೆ ಮಾಡಿ, ಅಧ್ಯಯನ ನಡೆಸಿದ್ದಾರೆ. ಜಿಲ್ಲಾ ಕೇಂದ್ರಗಳಿಗೆ ಆರ್‌ಟಿಒ ಕಚೇರಿ ನೀಡಲು ಸಾಧ್ಯವಿಲ್ಲ. ಬದಲಾಗಿ ಆನ್‌ಲೈನ್‌ ಸೇವೆಗಳನ್ನು ನೀಡಲಾಗುವುದು. ಫಿಟ್‌ನೆಸ್‌ ಸರ್ಟಿಫಿಕೇಟ್‌(ಎಫ್ಸಿ) ಮತ್ತು ಡ್ರೈವಿಂಗ್‌ ಲೈಸನ್ಸ್‌ (ಡಿಎಲ್‌) ಹೊರತುಪಡಿಸಿ 30ಕ್ಕೂ ಅಧಿಕ ಸೇವೆಗಳು ಆನ್‌ಲೈನ್‌ನಲ್ಲಿ ಲಭ್ಯವಿದೆ. ಬೈಂದೂರು, ಕುಂದಾಪುರ ಭಾಗದಲ್ಲಿ ಪ್ರತಿ ಮಂಗಳವಾರ ಸಾರಿಗೆ ಅದಾಲತ್‌ ನಡೆಸಲಾಗುತ್ತದೆ ಎಂದರು.

ಸುಕುಮಾರ ಶೆಟ್ಟಿಯವರು ಮಾತನಾಡಿ, ಜಿಲ್ಲೆಯಲ್ಲಿ 5 ಲಕ್ಷಕ್ಕೂ ಅಧಿಕ ವಾಹನ ನೋಂದಣಿಯಾಗಿವೆ. ಅದರಲ್ಲಿ 2 ಲಕ್ಷಕ್ಕೂ ಅಧಿಕ ವಾಹನಗಳು ಕುಂದಾಪುರ, ಬೈಂದೂರು ಭಾಗದಿಂದ ನೋಂದಣಿಯಾಗಿವೆ. ಉಡುಪಿ ಜಿಲ್ಲಾಕೇಂದ್ರದಲ್ಲಿ ಆರ್‌ಟಿಒ ಕಚೇರಿ ಇರುವುದರಿಂದ ಈ ಭಾಗದ ಸಾರ್ವಜನಿಕರು ಸಾಮಾನ್ಯ ಸೇವೆಗೂ 70 ಕಿ.ಮೀ ಅಧಿಕ ದೂರು ಸಂಚಾರ ಮಾಡಬೇಕಾಗಿದೆ. ಹೀಗಾಗಿ ಕುಂದಾಪುರ ಅಥವಾ ಬೈಂದೂರು ಭಾಗಕ್ಕೆ ಒಂದು ಆರ್‌ಟಿಒ ಕಚೇರಿ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಸಚಿವ ಶ್ರೀರಾಮುಲು ಉತ್ತರಿಸಿ, ಸರ್ಕಾರದ ಇ-ಆಡಳಿತ ಇಲಾಖೆಯ ಗ್ರಾಮ ಒನ್‌, ಜನ ಸೇವಕ ಯೋಜನೆಗಳಿಂದಲೂ ಸಾರಿಗೆ ಇಲಾಖೆಯ ಸೇವೆಯನ್ನು ಜನ ಸಾಮಾನ್ಯರಿಗೆ ತಲುಪಿಸಲಾಗುತ್ತಿದೆ.

ಹೀಗಾಗಿ ಹೊಸ ಆರ್‌ಟಿಒ ಕಚೇರಿ ಎಲ್ಲಿಯೂ ಸ್ಥಾಪಿಸುವುದಿಲ್ಲ ಎಂದರು.


Join The Telegram Join The WhatsApp
Admin
the authorAdmin

Leave a Reply