ಬೆಂಗಳೂರು: ʻಬಾನಲ್ಲೆ ಮಧುಚಂದ್ರಕೆʼ ಸಿನಿಮಾ ನಟ ಕೆ.ಶಿವರಾಮ್ (71) ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವರದಿಗಳ ಪ್ರಕಾರ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಐಸಿಯುನಲ್ಲಿ ಅಗತ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಶಿವರಾಮ ಅವರ ಅಳಿಯ ಭರತ್ ಹೇಳುವ ಪ್ರಕಾರ, 20 ದಿನಗಳ ಹಿಂದೆ ಅಧಿಕ ರಕ್ತದೊತ್ತಡದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಹೇಳಿದ್ದಾರೆ.

ನಗರದ ಎಚ್ ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಕಾರ್ಡಿಯಕ್ ಅರೆಸ್ಟ್ ಹಾಗೂ ಬ್ರೈನ್ ಡೆಡ್ ಆಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ʻಬಾನಲ್ಲೆ ಮಧುಚಂದ್ರಕೆʼ , ʻವಸಂತಕಾವ್ಯʼ ಚಿತ್ರದಲ್ಲಿ ನಟಿಸಿದ್ದರು. ರಾಜಕೀಯ ರಂಗದಲ್ಲೂ ನಟ ಗುರುತಿಸಿಕೊಂಡಿದ್ದರು. ಪ್ರತಿಭಟನೆ, ಯಾರಿಗೆ ಬೇಡ ದುಡ್ಡು, ಪ್ರೀತಿಗಾಗಿ ಆಟ, ನಾಗ, ಮೂಡಲ ಸೀಮೆಯಲಿ, ಸುಭಾಷ್, ಟೈಗರ್ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟರಾಗಿದ್ದರು. ತಮ್ಮ ಸಿನಿ ಜೀವನದಲ್ಲಿ 2017ರವರೆಗೆ 10 ಸಿನೆಮಾದಲ್ಲಿ ನಟಿಸಿದ್ದಾರೆ.

ʻಬಾ ನಲ್ಲೆ ಮಧುಚಂದ್ರಕೆʼ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಕೆ ಶಿವರಾಮ್ ವೃತ್ತಿಯಲ್ಲಿ ಐಎಎಸ್ ಅಧಿಕಾರಿಯಾಗಿದ್ದರು. ನಂತರ ʻವಸಂತ ಕಾವ್ಯʼ , ʻಸಾಂಗ್ಲಿಯಾನ 3ʼ ಖಳ ನಾಯಕ ಮುಂತಾದ ಚಿತ್ರಗಳಲ್ಲಿ ನಟಿಸಿದರು. ಕನ್ನಡದಲ್ಲಿಯೇ ಐಎಎಸ್ ಪರೀಕ್ಷೆ ಬರೆದು ಉತ್ತೀರ್ಣರಾದ ಮೊದಲ ಕನ್ನಡಿಗರು ಶಿವರಾಮ್. ಸುದೀರ್ಘ ಐಎಎಸ್ ವೃತ್ತಿಜೀವನದಲ್ಲಿ ವಿಜಯಪುರ, ಬೆಂಗಳೂರು, ಮೈಸೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.