ಬೆಳಗಾವಿ :
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯು ಡಬ್ಲ್ಯೂ ಜೆ) 2022 23ನೇ ಸಾಲಿನ ವಾರ್ಷಿಕ ಪ್ರಶಸ್ತಿ ವಿಭಾಗದಲ್ಲಿ ಅತ್ಯುತ್ತಮ ಪೋಟೋಗ್ರಫಿಗಾಗಿ ಪಿ.ಕೆ.ಬಡಿಗೇರ ಈ ಬಾರಿ ಪ್ರಶಸ್ತಿ ಪಡೆಯುತ್ತಿರುವುದು ವಿಶೇಷ.

ಸವದತ್ತಿ ತಾಲೂಕಿನ ಮದ್ಲೂರ ಗ್ರಾಮದ ಪಿ.ಕೆ.ಬಡಿಗೇರ ಅವರು ಮೂರು ದಶಕಗಳಿಂದ ಬೆಳಗಾವಿಯಲ್ಲಿ ನೆಲೆಸಿದ್ದು ಸಂಯುಕ್ತ ಕರ್ನಾಟಕ, ಉದಯವಾಣಿ, ವಾರ್ತಾ ಮತ್ತು ಪ್ರಸಾರ ಇಲಾಖೆ ಸೇರಿದಂತೆ ಬೆಳಗಾವಿಯ ಹಲವು ಪತ್ರಿಕೆಗಳಲ್ಲಿ ಪತ್ರಿಕಾ ಛಾಯಾಗ್ರಾಹಕರಾಗಿ ಕಾರ್ಯನಿರ್ವಹಿಸಿ ಶ್ರೇಷ್ಠ ಫೋಟೋಗಳ ಮೂಲಕ ನಾಡಿನ ಗಮನ ಸೆಳೆದಿದ್ದಾರೆ.