![](https://udayaprabha.com/wp-content/uploads/2024/05/IMG-20240520-WA0007.jpg)
ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಂತೇಶ ಕೌಜಲಗಿ ಕಾರು ಅಪಘಾತವಾಗಿರುವ ಘಟನೆ ನಡೆದಿದೆ.
ಶಾಸಕರ ಭವನದಿಂದ ಹೊರಟಿದ್ದ ಶಾಸಕ ಮಹಂತೇಶ್ ಕೌಜಲಗಿ ಕಾರು, ವಿಧಾನಸೌಧದಿಂದ ಹೊರಕ್ಕೆ ಬರುತ್ತಿದ್ದಂತೆ ಪೋಲೋ ವಾಹನ ಢಿಕ್ಕಿ ಹೊಡೆದಿದೆ. ಇದರಿಂದ ಶಾಸಕರಿಗೆ ಸ್ವಲ್ಪ ಮಟ್ಟಿನ ಗಾಯಗಳಾಗಿದ್ದು, ಬಳಿಕ ಶಾಸಕ ಬೇರೊಂದು ಕಾರಿನಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಕಬ್ಬನ್ ಪಾರ್ಕ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.