ಹುಬ್ಬಳ್ಳಿ: ಬೀದರ್‌ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಲೂಟಿ ಹಾಗೂ ಮಂಗಳೂರಲ್ಲಿ ಕೋಟೆಕಾರ್ ಬ್ಯಾಂಕ್ ದರೋಡೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಭಾನುವಾರ ರಾತ್ರಿ ಕೆನರಾ ಬ್ಯಾಂಕ್‌ ಲೂಟಿ ಯತ್ನ ನಡೆದಿದೆ. ನಗರದ ಎಪಿ ಎಂಸಿಯಲ್ಲಿನ ಬ್ಯಾಂಕ್‌ ಶಾಖೆಗೆ ನುಗ್ಗಿದ ತಂಡವೊಂದು ಬ್ಯಾಂಕಿನ ಬಾಗಿಲು ಮುರಿಯಲೆತ್ನಿಸಿದೆ.

ಸೋಮವಾರ ಬೆಳಗ್ಗೆ ಬ್ಯಾಂಕ್ ಸಿಬ್ಬಂದಿ ಬಂದು ನೋಡಿದಾಗ ವಿಷಯ ಗೊತ್ತಾಗಿದೆ. ಸಂಪೂರ್ಣವಾಗಿ ಬಾಗಿಲು ತೆಗೆಯಲು ಕಳ್ಳರು ವಿಫಲರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸೋಮವಾರ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ ಬ್ಯಾಂಕ್ ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ.