ಬೆಳಗಾವಿ :
ಲೋಕಸಭೆಯಲ್ಲಿ ಕೆಲ ದುಷ್ಕರ್ಮಿಗಳು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಹಿನ್ನೆಲೆ ಬೆಳಗಾವಿ ಸುವರ್ಣಸೌಧದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಸ್ಪೀಕ‌ರ್ ಯು.ಟಿ ಖಾದರ್ ತುರ್ತುಸಭೆ ಕರೆದಿದ್ದಾರೆ.
ಬೆಳಗಾವಿ ಸುವರ್ಣಸೌಧದಲ್ಲಿ ಸ್ಪೀಕರ್ ಯು.ಟಿ ಖಾದ‌ರ್ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಿದ್ದಾರೆ.ಅಪರಿಚಿತ ವ್ಯಕ್ತಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಬೇಡಿ, ಚೆಕ್ ಮಾಡಿ ಒಳಗೆ ಬಿಡಿ. ಪಾಸ್ ಇಲ್ಲದವರನ್ನು ಒಳಗೆ ಬಿಡಬೇಡಿ ಎಂದು ಕಟ್ಟು ನಿಟ್ಟಾಗಿ ಸೂಚನೆ ನೀಡಿದರು .

ಸಂಸತ್ ಘಟನೆ ಬೆನ್ನಲ್ಲೇ ಸುವರ್ಣಸೌಧದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಸಂಸತ್ತಿನ ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆಯ ಸದಸ್ಯರ ಪೀಠಕ್ಕೆ ಜಿಗಿದು ಹಳದಿ ಬಣ್ಣದ ಆಶ್ರುವಾಯು ಸಿಡಿಸುತ್ತಾ ಓಡಾಡಿದ ಘಟನೆ ಬುಧವಾರ ಲೋಕಸಭೆಯಲ್ಲಿ ನಡೆದಿದೆ, ಪರಿಣಾಮ ಸದನವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಯಿತು.

ಇದರ ಪರಿಣಾಮ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಶೇಷ ಅಧಿವೇಶನ ಮೇಲು ಪರಿಣಾಮ ಬೀರಿದ್ದು ಪೊಲೀಸರು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದಾರೆ.