ಯಾದಗಿರಿ :

ಹೃದಯಾಘಾತದಿಂದ ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ರಾಜಧಾನಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಯಾದಗಿರಿ ಜಿಲ್ಲೆಯ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ (67) ಹೃದಯಾಘಾತದಿಂದ ಮೃತಪಟ್ಟಿದ್ದು, ತೀವ್ರ ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. AICC ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ಆಪ್ತರಾಗಿದ್ದ ಇವರು, ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ ಪಕ್ಷದಿಂದ ರಾಜಕೀಯ ಪ್ರವೇಶಿಸಿ 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕರೆನಿಸಿಕೊಂಡಿದ್ದರು.