ಬೆಂಗಳೂರು :
ಸರ್ಕಾರದ ಐತಿಹಾಸಿಕ ಐದು ಗ್ಯಾರಂಟಿ ಸ್ಕೀಂ ಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸಮಿತಿಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ.

ಮಾಜಿ ಸಚಿವ ಹೆಚ್.ಎಂ.ರೇವಣ್ಣ ಅವರು ಅಧ್ಯಕ್ಷರಾಗಿ ಕ್ಯಾಬಿನೆಟ್ ದರ್ಜೆ ಹೊಂದಿದ್ದಾರೆ.

ಉಪಾಧ್ಯಕ್ಷರಾಗಿ ಮೆಹರೂಜ್ ಖಾನ್, ಪುಷ್ಪ ಅಮರನಾಥ್, ಎಸ್.ಆರ್.ಪಾಟೀಲ್ ಮತ್ತು ಸೂರಜ್ ಹೆಗ್ಡೆ ಅವರ ಹೆಸರನ್ನು ಮುಖ್ಯಮಂತ್ರಿಗಳು ಅನುಮೋದಿಸಿದ್ದಾರೆ.

ನಿಗಮ ಮಂಡಳಿ :
44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದಿಸಿದ್ದಾರೆ. ಈ ಪಟ್ಟಿ ಆಯಾ ಇಲಾಖೆಗಳಿಗೆ ರವಾನೆಯಾಗಿದೆ. ಗುರುವಾರ ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆಯಾಗಿ ಡಾ. ನಾಗಲಕ್ಷ್ಮೀ ಚೌಧರಿ ನೇಮಕವಾಗಿದ್ದಾರೆ. ದಾಸರಹಳ್ಳಿ ಕ್ಷೇತ್ರದ ಟಿಕೆಟ್ ತ್ಯಾಗ ಮಾಡಿದ್ದ ಹಿನ್ನೆಲೆಯಲ್ಲಿ ನಾಗಲಕ್ಷ್ಮೀ ಚೌಧರಿ ಅವರನ್ನು ಮಹಿಳಾ ಆಯೋಗಕ್ಕೆ ನೇಮಕ ಮಾಡಲಾಗಿದೆ ಎನ್ನಲಾಗಿದೆ.