This is the title of the web page
This is the title of the web page

Live Stream

March 2023
S M T W T F S
 1234
567891011
12131415161718
19202122232425
262728293031  

| Latest Version 9.4.1 |

State News

ಚಳಿಗಾಲದ ಅಧಿವೇಶದಲ್ಲಿ ವಕೀಲರ ರಕ್ಷಣಾ ಮಸೂದೆ ಮಂಡನೆ: ವಕೀಲರ ಸಂಘದ ಮನವಿಗೆ ಸಿಎಂ ಸ್ಪಂದನೆ  

Join The Telegram Join The WhatsApp

ಬೆಂಗಳೂರು

ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಕೀಲರ ರಕ್ಷಣಾ ಮಸೂದೆಯನ್ನು ಮಂಡಿಸುವುದಾಗಿ ವಕೀಲರ ಸಂಘದ ನಿಯೋಗಕ್ಕೆ ನಿನ್ನೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ನಿನ್ನೆ ತಮ್ಮನ್ನು ಭೇಟಿಯಾಗಿ ಮನವಿ ಸಲ್ಲಿಸಿದ ವಕೀಲರ ಸಂಘದ ನಿಯೋಗಕ್ಕೆ ಈ ವಿಷಯ ತಿಳಿಸಿದರು.

ಇತ್ತೀಚಿನ ದಿನಗಳಲ್ಲಿ ಕರ್ತವ್ಯ ನಿರತ ವಕೀಲರ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿದ್ದು, ಅನೇಕರನ್ನು ಕೊಲ್ಲಲಾಗಿದೆ. ಈ ಹಿನ್ನೆಲೆಯಲ್ಲಿ ವಕೀಲರ ರಕ್ಷಣಾ ಕಾಯ್ದೆಯ ಕರಡು ಮಸೂದೆಯನ್ನು ಡಿಸೆಂಬರ್ 18 ರಿಂದ ಪ್ರಾರಂಭವಾಗುತ್ತಿರುವ ಅಧಿವೇಶನದಲ್ಲಿ ಎರಡೂ ಸದನಗಳಲ್ಲಿ ಮಂಡಿಸುವಂತೆ ಮುಖ್ಯಮಂತ್ರಿಗಳನ್ನು ವಕೀಲರ ಸಂಘ, ಬೆಂಗಳೂರು ಹಾಗೂ ರಾಜ್ಯದ ವಿವಿಧ ವಕೀಲ ಸಂಘಗಳು ಕೋರಿವೆ.

ನವೆಂಬರ್ 5 ರಂದು ನಡೆದ ವಕೀಲರ ಸಂಘದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ಭರವಸೆ ನೀಡಿದ್ದರು. ಕಾಯ್ದೆಯ ಅಂತಿಮ ಕರಡು ಕಾನೂನು ಇಲಾಖೆಯಲ್ಲಿರುವುದಾಗಿ ಸಂಘವು ಮನವಿ ಪತ್ರದಲ್ಲಿ ತಿಳಿಸಿದೆ.

ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾ ರೆಡ್ಡಿ, ಕಾರ್ಯದರ್ಶಿ ಟಿ. ಜಿ.ರವಿ, ಖಜಾಂಚಿ ಹರೀಶ್ ಎಂ.ಟಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು


Join The Telegram Join The WhatsApp
Admin
the authorAdmin

Leave a Reply