ಬೆಳಗಾವಿ: ಕೆ.ಎಲ್.ಇ ಸಂಸ್ಥೆಯ ಸ್ವತಂತ್ರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಸಭೆಯನ್ನುದ್ದೇಶಿಸಿ ಮಹಾವಿದ್ಯಾಲಯದ ಪ್ರಾಚಾರ್ಯ ವೇಣುಗೋಪಾಲ ರೆಡ್ಡಿ ಇವರು ಪ್ರಜಾಸತ್ತಾತ್ಮಕ ಮೌಲ್ಯಗಳ ಪ್ರಾಮುಖ್ಯತೆಯನ್ನು ವಿವರಿಸಿದರು. ಭೌತಶಾಸ್ತ್ರದ ಉಪನ್ಯಾಸಕ ಸೌರಭ ಕುಲಕರ್ಣಿ ಅವರು ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿದರು. ಎಲ್ಲ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.