ಹಾಸನ: ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್‌ ಸದಸ್ಯ ಸೂರಜ್ ರೇವಣ್ಣ ಅವರನ್ನು ಭಾನುವಾರ ಮುಂಜಾನೆವರೆಗೂ ಸಿಇಎನ್ ಠಾಣೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ ಪೊಲೀಸರು ಭಾನುವಾರ ಬೆಳಿಗ್ಗೆ ಬಂಧಿಸಿದ್ದಾರೆ.

ತನಿಖಾಧಿಕಾರಿಯಾಗಿರುವ ಸಕಲೇಶಪುರ ಡಿವೈಎಸ್ಪಿ ಪ್ರಮೋದ್ ಕುಮಾ‌ರ್, ಸೂರಜ್ ಅವರನ್ನು ಬಂಧಿಸಿದ್ದು, ಮಧ್ಯಾಹ್ನ ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆ ಇದೆ.

ಶನಿವಾರ ರಾತ್ರಿ 7.30 ರ ಸಮಯದಲ್ಲಿ ಸಿಇಎನ್ ಪೊಲೀಸ್‌ ಠಾಣೆಗೆ ಡಾ.ಸೂರಜ್‌ರೇವಣ್ಣ ಅವರನ್ನು ಕರೆ ತಂದಿದ್ದ ಪೊಲೀಸರು ಸಂತ್ರಸ್ತ ನೀಡಿರುವ ದೂರು ಹಾಗೂ ಸೂರಜ್ ಆಪ್ತ ನೀಡಿರುವ ದೂರುಗಳ ಪ್ರತ್ಯೇಕ ವಿಚಾರಣೆ ನಡೆಸಿ ಹೇಳಿಕೆ ಪಡೆದುಕೊಂಡಿದ್ದಾರೆ.

ರಾತ್ರಿ ಪೊಲೀಸ್‌ ಠಾಣೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಅಧಿಕಾರಿಗಳಿಗೆ ಸೂಚನೆ ನೀಡಿ ತೆರಳಿದರು.