
ಬೆಳಗಾವಿ : ನಗರದ ಹಾಸ್ಯಕೂಟ ಮತ್ತು ಕನ್ನಡ ಸಾಹಿತ್ಯ ಭವನ ವಿಶ್ವಸ್ತ ಮಂಡಳಿ ಸಂಯುಕ್ತ ಆಶ್ರಯದಲ್ಲಿ ಹಾಸ್ಯಕೂಟದ 11 ನೇ ವಾರ್ಷೀಕೋತ್ಸವದ (133 ನೇ ಕಾರ್ಯಕ್ರಮ) ನಿಮಿತ್ತವಾಗಿ ಗುರುವಾರ ಏ.17 ರಂದು 4:30 ಕ್ಕೆ ಚನ್ನಮ್ಮ ವೃತ್ತದ ಬಳಿಯಿರುವ ಕನ್ನಡ ಸಾಹಿತ್ಯ ಭವನದಲ್ಲಿ “ನಗೆ ಬೇಕರಿ – ನಗಬೇಕ್ರಿ” ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪ್ರಮುಖ ಭಾಷಣಕಾರರಾಗಿ ಖ್ಯಾತ ಹನಿಗವಿ ಎಚ್ ಡುಂಡಿರಾಜ್ ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ಖ್ಯಾತ ನ್ಯಾಯವಾದಿ ಎಸ್. ಎಂ. ಕುಲಕರ್ಣಿ ವಹಿಸಿಕೊಳ್ಳಲಿದ್ದು ಅತಿಥಿಗಳಾಗಿ ರಂಗಸಂಪದದ ಅಧ್ಯಕ್ಷ ಅರವಿಂದ ಕುಲಕರ್ಣಿ ಆಗಮಿಸಲಿದ್ದಾರೆ. ಪ್ರಾಯೋಜಕತ್ವವನ್ನು ನಿವೃತ್ತ ಬ್ಯಾಂಕ್ ಅಧಿಕಾರಿ ಅರವಿಂದ ಹುನಗುಂದ ವಹಿಸಿಕೊಂಡಿದ್ದಾರೆ. ಪ್ರಾಸ್ತಾವಿಕ ನುಡಿಯನ್ನು ಹಾಸ್ಯಕೂಟ ಸಂಚಾಲಕ ಗುಂಡೇನಟ್ಟಿ ಮಧುಕರ ಆಡಲಿದ್ದಾರೆ. ಪ್ರವೇಶ ಉಚಿತವಾಗಿದ್ದು ಹಾಸ್ಯಪ್ರಿಯರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಕ್ಕು ಹಗುರಾಗುವಂತೆ ಕ.ಸಾ.ಭ. ವಿಶ್ವಸ್ತ ಮಂಡಳಿಯ ಗೌರವ ಕಾರ್ಯದರ್ಶಿ ರಾಮಚಂದ್ರ ಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.