ಎಣ್ಮೂರು : ಎಣ್ಮೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮ ಎಸ್ ಡಿಎಂಸಿ ಅಧ್ಯಕ್ಷ ಅಬ್ದುಲ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಪ್ರಾರಂಭವಾಯಿತು. ಮುಖ್ಯೋಪಾಧ್ಯಾಯರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯ ಅಧ್ಯಕ್ಷರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ಸಮವಸ್ತ್ರಗಳನ್ನು ವಿತರಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಕಾಶ್ ರೈ ಹಾಗೂ ಎಸ್ ಡಿಎಂಸಿ ಉಪಾಧ್ಯಕ್ಷೆ ಸುನಿತಾ ಉಪಸ್ಥಿತರಿದ್ದರು. ಸುರೇಖಾ ನಿರೂಪಿಸಿದರು. ಗುಲಾಬಿ ವಂದಿಸಿದರು. ಹಿರಿಯ ಶಿಕ್ಷಕಿ ಶಾಂತಮ್ಮ ಹಾಗೂ ಗೌರವ ಶಿಕ್ಷಕಿ ಸೌಮ್ಯ ಲತಾ ಮತ್ತು ಎಸ್ ಡಿಎಂಸಿ ಪದಾಧಿಕಾರಿಗಳು ಹಾಗೂ ಪೋಷಕರು ಭಾಗವಹಿಸಿದ್ದರು.