ಮೂಡಲಗಿ:

ಉತ್ತರ ಕರ್ನಾಟಕ ಭಾಗದ ಮಹತ್ವಾಂಕ್ಷೆಯ ಮಹದಾಯಿ ಯೋಜನೆಗೆ ರಾಷ್ಟ್ರೀಯ ವನ್ಯಜೀವಿ ಮತ್ತು ಅರಣ್ಯ ವಿಭಾಗದಿಂದ ಅನುಮತಿ ಬಾಕಿ ಇದ್ದು, ಯೋಜನೆಯ ಪ್ರಾರಂಭಕ್ಕೆ ಆದಷ್ಟು ಬೇಗ ಅನುಮತಿ ನೀಡಿ, ಕುಡಿಯುವ ನೀರಿನ ಯೋಜನೆಗೆ ಮಂಜೂರಾತಿ ಒದಗಿಸಿಕೊಡಬೇಕೆಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ, ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ಸಚಿವ ಭೂಪೇಂದ್ರ ಯಾದವ್ ಹಾಗೂ ಮಾನ್ಯ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರಸಿಂಗ್​ ಶೇಖಾವತ್‌ ಅವರಿಗೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭೇಟಿಯಾಗಿ ಮನವಿ ಮಾಡಿದರು.