ಬೆಳಗಾವಿ :
ನವದೆಹಲಿಯಲ್ಲಿ ರೈಲ್ವೆ ಬೋರ್ಡ್ ಚೇರಮನ್‌ ಜಯಾವರ್ಮ ಸಿನ್ಹಾ ಅವರನ್ನು ಮಂಗಳವಾರ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಭೇಟಿಯಾಗಿ, ಬೆಳಗಾವಿ ಜಿಲ್ಲೆಯ ರೈಲ್ವೆಗೆ ಸಂಬಂಧಪಟ್ಟ ವಿಷಯಗಳ ಕುರಿತು ಅವರೊಂದಿಗೆ ವಿಸ್ತೃತ ಚರ್ಚೆ ನಡೆಸಿದರು.

ಜಯಾವರ್ಮ ಸಿನ್ಹಾ ಅವರು ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಕಡಾಡಿ ತಿಳಿಸಿದ್ದಾರೆ.

ಬೆಳಗಾವಿ ಕೋರ್ ಡೆವಲಪ್‌ಮೆಂಟ್ ಗ್ರೂಪ್ ಸದಸ್ಯರಾದ ಶೈಲೇಶ್ ಯಲಮಳ್ಳಿ, ಅಶ್ವಿನ್ ಪಾಟೀಲ, ಸಂದೀಪ ಪಾಟೀಲ ಉಪಸ್ಥಿತರಿದ್ದರು.