ಬೆಂಗಳೂರು: ಐಟಿಪಿಎಲ್ ರಸ್ತೆಯ ವೈಟ್‌ಫೀಲ್ಡ್ ಬಳಿಯಿರುವ ಬೆಂಗಳೂರಿನ ರಾಜಾಜಿನಗರದಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಕನಿಷ್ಠ 9 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸ್ಫೋಟಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಒಯ್ಯಲಾಗಿದೆ. ಗಾಯಗೊಂಡವರಲ್ಲಿ ಮೂವರು ಕೆಫೆಯ ಉದ್ಯೋಗಿಗಳು ಎಂದು ವರದಿಯಾಗಿದೆ. ಈವರೆಗಿನ ವರದಿಗಳ ಪ್ರಕಾರ, ಸಮೀಪದ ಯಾವುದೇ ಕಟ್ಟಡ ಅಥವಾ ಸಂಸ್ಥೆಗೆ ಯಾವುದೇ ಹಾನಿಯಾಗಿಲ್ಲ.
ರಾಮೇಶ್ವರಂ ಕೆಫೆ ಬೆಂಗಳೂರಿನ ಜನಪ್ರಿಯ ತಿನಿಸುಗಳ ತಾಣ. ಶುಕ್ರವಾರ ಮಧ್ಯಾಹ್ನ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಊಟ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಮಧ್ಯಾಹ್ನ 1:15 ರ ಸುಮಾರಿಗೆ ಹಲವಾರು ಗ್ರಾಹಕರು ಉಪಾಹಾರಕ್ಕಾಗಿ ರೆಸ್ಟೋರೆಂಟ್‌ಗೆ ಹಾಜರಾಗಿದ್ದಾಗ ಸ್ಫೋಟ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಭಯೋತ್ಪಾದನಾ ನಿಗ್ರಹ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ತಂಡ ಸಹ ಕೆಫೆಗೆ ಆಗಮಿಸಿದೆ. ಗಾಯಗೊಂಡವರಲ್ಲಿ ಮೂವರು ಕೆಫೆಯ ಉದ್ಯೋಗಿಗಳಾಗಿದ್ದು, ನಾಲ್ಕನೆಯವರು ಗ್ರಾಹಕರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಯಾವುದೇ ಕೋನವನ್ನು ತಳ್ಳಿಹಾಕಿಲ್ಲ ಎಂದು ಮೂಲಗಳು ತಿಳಿಸಿವೆ. ಬಾಂಬ್ ಸ್ಕ್ವಾಡ್ ಮತ್ತು ವಿಧಿವಿಜ್ಞಾನ ತಂಡ ಕೆಫೆಯಲ್ಲಿದೆ.
ಸ್ಫೋಟದ ನಂತರ ಯಾವುದೇ ಬೆಂಕಿ ಕಾಣಿಸಿಕೊಂಡಿಲ್ಲ, ಇದು ಅಡುಗೆ ಅನಿಲ ಸಿಲಿಂಡರ್ ಸ್ಫೋಟದಂತೆ ತೋರುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.ವರದಿ ಪ್ರಕಾರ, ಇಡೀ ಪ್ರದೇಶವನ್ನು ಸೀಲ್ ಮಾಡಲಾಗಿದೆ ಮತ್ತು ಪ್ರದೇಶದಲ್ಲಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಸ್ಫೋಟದ ನಂತರ ಯಾವುದೇ ಬೆಂಕಿ ಕಾಣಿಸಿಕೊಂಡಿಲ್ಲ, ಇದು ಅಡುಗೆ ಅನಿಲ ಸಿಲಿಂಡರ್ ಸ್ಫೋಟದಂತೆ ತೋರುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.
ಇದು ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟವೇ ಎಂದು ನೋಡಲು ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಅನೇಕ ಜನರು ಐಇಡಿ ಇರಿಸಲಾಗಿದೆ ಮತ್ತು ಚೀಲ ತಂದು ಇಟ್ಟಿರುವ ಬಗ್ಗೆ ಹೇಳುತ್ತಿದ್ದಾರೆ, ಆದರೆ ನಮಗೆ ಇನ್ನೂ ಅಧಿಕೃತ ದೃಢೀಕರಣ ಸಿಕ್ಕಿಲ್ಲ. ಗೃಹ ಇಲಾಖೆ ಅಧಿಕೃತ ಮಾಹಿತಿಯನ್ನು ನೀಡುತ್ತದೆ ಎಂದು ಕರ್ನಾಟಕ ಪೊಲೀಸ್ ಮುಖ್ಯಸ್ಥ ಅಲೋಕ್ ಮೋಹನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.