ಬೈಲಹೊಂಗಲ: ಜಮೀನಿನಲ್ಲಿ ನೀರು ಹಾಯಿಸುವಾಗ ಸಿಡಿಲು ಬಡಿದು ರೈತ ಮೃತಪಟ್ಟ ಘಟನೆ ತಾಲೂಕಿನ ಹನಮನಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕೆಂಚಪ್ಪ ಬಸವಣ್ಣೆಪ್ಪ ಕಾವಲದ (31) ಮೃತ ರೈತ. ಮೃತ ರೈತನಿಗೆ ಪತ್ನಿ, ಇಬ್ಬರು ಪುತ್ರರು, ತಂದೆ, ತಾಯಿ ಸೇರಿದಂತೆ ಅಪಾರ ಬಂಧು-ಬಳಗ ಇದೆ.