ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಭಯ ಭೀತಿ ಉಂಟಾಗುತ್ತಿದ್ದು ಯಾವುದೇ ಸಮಸ್ಯೆ ಉಂಟಾದಲ್ಲಿ ಸಂಪರ್ಕ ಸೇವೆಗಾಗಿ ಇದೀಗ ಜಿಲ್ಲಾಡಳಿತ ಸಹಾಯವಾಣಿಯನ್ನು ಆರಂಭಿಸಿದೆ. ಜಿಲ್ಲೆಯ ನಾಗರಿಕರು ಯಾವುದೇ ಸಮಸ್ಯೆಗಳು ಇದ್ದಲ್ಲಿ ಈ ಸಹಾಯವಣಿಗೆ ಕರೆ ಮಾಡಿ ತಮ್ಮ ಸಮಸ್ಯೆ ಹೇಳಿದರೆ ಜಿಲ್ಲಾಡಳಿತ ತಕ್ಷಣ ಸ್ಪಂದಿಸಲಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.