ಬೆಳಗಾವಿ : ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ಮಕ್ಕಳ ಸಂರಕ್ಷಣೆ ದೃಷ್ಟಿಯಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಅಥಣಿ ತಾಲೂಕಿನ ಶಾಲಾ ಮಕ್ಕಳಿಗೆ ಮಾತ್ರ ರಜೆ ಘೋಷಿಸಲಾಗಿದೆ. ಶಿಕ್ಷಕರು ಯಥಾಪ್ರಕಾರ ಶಾಲೆಗೆ ಹೋಗುವುದು, ಮುಖ್ಯೋಪಾಧ್ಯಾಯರು ಮೇಲಿನ ಸೂಚನೆಯನ್ನು ಗಮನಿಸಿ ಕ್ರಮ ಕೈಗೊಳ್ಳುವಂತೆ ಬಿಇಒ ಅಥಣಿ ತಿಳಿಸಿದ್ದಾರೆ.