ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮೊದಲ ಸಚಿವ ಸಂಪುಟ ಸಭೆ ಯಶಸ್ವಿಯಾಗಿ ನಡೆದಿದೆ. ಇದೇ ವೇಳೆ ಮೋದಿ ಸಂಪುಟ ಸಚಿವರ ಖಾತೆ ಮಾಹಿತಿಯೂ ಬಹಿರಂಗವಾಗಿದೆ. ಈ ಪೈಕಿ ರಾಜ್ಯದ ಸಂಸದರಿಗೆ ಭರ್ಜರಿ ಖಾತೆ ನೀಡಲಾಗಿದೆ. ಕಳೆದ ಬಾರಿ ಮೋದಿ ಸರ್ಕಾರದಲ್ಲಿ ಕಲ್ಲಿದ್ದಲ್ಲು ಸಚಿವರಾಗಿದ್ದ ಪ್ರಹ್ಲಾದ್ ಜೋಶಿಗೆ ಪ್ರಮುಖ ಖಾತೆ ನೀಡಲಾಗಿದೆ. ಜೋಶಿಗೆ ಆಹಾರ ಮತ್ತು ಗ್ರಾಹಕ ವ್ವಹಾರ ಹಾಗೂ ನವೀಕರಿಸಬಹುದಾದ ಇಂಧನ ಖಾತೆಯನ್ನು ನೀಡಲಾಗಿದೆ. ಬಿಜೆಪಿ ಮೈತ್ರಿ ಪಕ್ಷವಾಗಿ ಜೆಡಿಎಸ್‌ಗೆ ಪ್ರಮುಖ ಖಾತೆ ನೀಡಲಾಗಿದೆ. ಹೆಚ್‌ಡಿ ಕುಮಾರಸ್ವಾಮಿಗೆ ಉಕ್ಕು ಹಾಗೂ ಬೃಹತ್ ಕೈಗಾರಿಗೆ ಖಾತೆ ನೀಡಲಾಗಿದೆ. ಇನ್ನು ಶೋಭ ಕರಂದ್ಲಾಜೆಗೆ ಸಣ್ಣ ಮತ್ತು ಅತೀ ಸೂಕ್ಷ್ಮ ಕೈಗಾರಿಕೆ ರಾಜ್ಯ ಖಾತೆ ಹಂಚಿಕೆ ಮಾಡಲಾಗಿದೆ. ಇನ್ನು ವಿ ಸೋಮಣ್ಣಗೆ ಜಲ ಶಕ್ತಿ ರಾಜ್ಯ ಖಾತೆ ನೀಡಲಾಗಿದೆ.ಕ್ಯಾಬಿನೆಟ್ ದರ್ಜೆ ಸಚಿವರುಹೆಚ್ ಡಿ ಕುಮಾರಸ್ವಾಮಿ: ಉಕ್ಕು ಮತ್ತು ಬೃಹತ್ ಕೈಗಾರಿಕೆ ಪ್ರಲ್ಹಾದ ಜೋಶಿ: ಆಹಾರ ಮತ್ತು ಗ್ರಾಹಕ ವ್ಯವಹಾರ, ನವೀಕರಿಸಬಹುದಾದ ಇಂಧನ ರಾಜ್ಯ ಖಾತೆ ಸಚಿವರು ವಿ  ಸೋಮಣ್ಣ: ರೈಲ್ವೇ ಹಾಗೂ ಜಲಶಕ್ತಿಶೋಭ ಕರಂದ್ಲಾಜೆ: ಸೂಕ್ಷ್ಮ, ಮಧ್ಯಮ ಹಾಗೂ ಸಣ್ಣ ಕೈಗಾರಿಕೆ

 

 

ನವದೆಹಲಿ: ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಮಹತ್ವದ ಖಾತೆಗಳನ್ನು ಬಿಜೆಪಿ ಸಚಿವರಿಗೇ ನೀಡಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರೇ ಹಾಗೂ ರಾಷ್ಟ್ರೀಯ ಹೆದ್ದಾರಿ ಹಾಗೂ ಭೂಸಾರಿಗೆ ಖಾತೆಗಳನ್ನು ನಿತಿನ್‌ ಗಡ್ಕರಿ ಅವರೇ ಮುಂದುರಿಸಿಕೊಂಡು ಹೋಗಲಿದ್ದಾರೆ. ನರೇಂದ್ರ ಮೋದಿ ಅವರು ಯಾರಿಗೆ ಯಾವ ಖಾತೆ ನೀಡಿದ್ದಾರೆ ಎಂಬುದರ ಮಾಹಿತಿ ಇಲ್ಲಿದೆ.

ಹೀಗಿದೆ ಸಂಪುಟ ದರ್ಜೆ ಸಚಿವರ ಪಟ್ಟಿ ಹಾಗೂ ಅವರ ಖಾತೆಗಳು
ಅಮಿತ್ ಶಾ (ಬಿಜೆಪಿ- ಗುಜರಾತ್)- ಗೃಹ ಖಾತೆ
ರಾಜನಾಥ್ ಸಿಂಗ್ (ಬಿಜೆಪಿ- ಉತ್ತರ ಪ್ರದೇಶ)- ರಕ್ಷಣಾ ಖಾತೆ
ನಿತಿನ್ ಗಡ್ಕರಿ (ಬಿಜೆಪಿ- ಮಹಾರಾಷ್ಟ್ರ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ
ಜೆ.ಪಿ.ನಡ್ಡಾ (ಬಿಜೆಪಿ- ಹಿಮಾಚಲ ಪ್ರದೇಶ)- ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಶಿವರಾಜ್ ಸಿಂಗ್ ಚೌಹಾಣ್ (ಬಿಜೆಪಿ- ಮಧ್ಯಪ್ರದೇಶ )-‌ ಕೃಷಿ‌, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್
ನಿರ್ಮಲಾ ಸೀತಾರಾಮನ್ (ರಾಜ್ಯಸಭೆ ಬಿಜೆಪಿ ಸದಸ್ಯೆ)- ಹಣಕಾಸು
ಎಸ್.ಜೈ ಶಂಕರ್ (ರಾಜ್ಯಸಭೆ ಬಿಜೆಪಿ ಸದಸ್ಯ)- ವಿದೇಶಾಂಗ ವ್ಯವಹಾರಗಳ ಖಾತೆ
ಮನೋಹರ ಲಾಲ್‌ ಖಟ್ಟರ್‌ (ಬಿಜೆಪಿ- ಹರಿಯಾಣ)- ಇಂಧನ‌ ಮತ್ತು ವಸತಿ
ಎಚ್‌.ಡಿ.ಕುಮಾರಸ್ವಾಮಿ (ಜೆಡಿಎಸ್‌- ಕರ್ನಾಟಕ)- ಉಕ್ಕು ಮತ್ತು ಬೃಹತ್‌ ಕೈಗಾರಿಕೆ
ಪಿಯೂಷ್‌ ಗೋಯಲ್‌ (ಬಿಜೆಪಿ- ಮಹಾರಾಷ್ಟ್ರ )- ವಾಣಿಜ್ಯ
ಧರ್ಮೇಂದ್ರ ಪ್ರಧಾನ್ (ಬಿಜೆಪಿ- ಒಡಿಶಾ): ಶಿಕ್ಷಣ‌, ಮಾನವ ಸಂಪನ್ಮೂಲ
ಜಿತನ್ ರಾಮ್ ಮಾಂಝಿ (ಎಚ್‌ಎಎಂ- ಬಿಹಾರ)- ಸಣ್ಣ ಮತ್ತು ಮಧ್ಯಮ ಕೈಗಾರಿಕೆ
ರಾಜೀವ್‌ ರಂಜನ್‌ ಸಿಂಗ್‌ (ಲಲನ್‌ ಸಿಂಗ್-ಜೆಡಿಯು-ಬಿಹಾರ)
ಸರ್ಬಾನಂದ ಸೋನೊವಾಲ್‌‌ (ಬಿಜೆಪಿ- ಅಸ್ಸಾಂ): ಬಂದರು, ಜಲಸಾರಿಗೆ
ರಾಮ್‌ ಮೋಹನ್‌ ನಾಯ್ಡು (ಟಿಡಿಪಿ-ಆಂಧ್ರಪ್ರದೇಶ)- ನಾಗರಿಕ ವಿಮಾನಯಾನ
ಪ್ರಲ್ಹಾದ್‌ ಜೋಶಿ (ಬಿಜೆಪಿ- ಕರ್ನಾಟಕ): ಆಹಾರ ಮತ್ತು ಗ್ರಾಹಕ ವ್ಯವಹಾರಗಳು, ನವೀಕರಿಸಬಹುದಾದ ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ
ಡಾ.ವೀರೇಂದ್ರ ಕುಮಾರ್ (ಬಿಜೆಪಿ-ಮಧ್ಯಪ್ರದೇಶ)- ಸಾಮಾಜಿಕ ನ್ಯಾಯ
ಜುವೆಲ್‌ ಒರಾಮ್‌ (ಬಿಜೆಪಿ- ಒಡಿಶಾ)- ಬುಡಕಟ್ಟು
ಗಿರಿರಾಜ್‌ ಸಿಂಗ್‌ (ಬಿಜೆಪಿ-ಬಿಹಾರ) -‌ ಜವಳಿ
ಅಶ್ವಿನಿ ವೈಷ್ಣವ್‌ (ಬಿಜೆಪಿ-ರಾಜಸ್ಥಾನ-ರಾಜ್ಯಸಭೆ ಸದಸ್ಯ) – ರೈಲ್ವೆ ಮತ್ತು ಮಾಹಿತಿ ಪ್ರಸಾರ
ಜ್ಯೋತಿರಾದಿತ್ಯ ಸಿಂಧಿಯಾ (ಬಿಜೆಪಿ-ಮಧ್ಯಪ್ರದೇಶ)- ಟೆಲಿಕಾಮ್
ಭೂಪೇಂದ್ರ ಯಾದವ್‌ (ಬಿಜೆಪಿ-ರಾಜಸ್ಥಾನ)- ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ
ಗಜೇಂದ್ರ ಸಿಂಗ್ ಶೇಖಾವತ್ (ಬಿಜೆಪಿ- ರಾಜಸ್ಥಾನ): ಪ್ರವಾಸೋದ್ಯಮ ಮತ್ತು ಸಂಸ್ಕೃತಿ
ಅನ್ನಪೂರ್ಣ ದೇವಿ (ಬಿಜೆಪಿ-ಜಾರ್ಖಂಡ್)-ಮಹಿಳಾ ಮತ್ತು ಮಕ್ಕಳ ಕಲ್ಯಾಣ
ಕಿರಣ್‌ ರಿಜಿಜು (ಬಿಜೆಪಿ- ಅರುಣಾಚಲ ಪ್ರದೇಶ)-‌ ಸಂಸದೀಯ ವ್ಯವಹಾರ
ಹರ್ದೀಪ್ ಸಿಂಗ್ ಪುರಿ (ರಾಜ್ಯಸಭೆ ಬಿಜೆಪಿ ಸದಸ್ಯ-ಪಂಜಾಬ್)- ಪೆಟ್ರೋಲಿಯಂ
ಡಾ.ಮನ್ಸುಖ್‌ ಮಂಡಾವೀಯ (ಬಿಜೆಪಿ-ಗುಜರಾತ್)‌: ಕಾರ್ಮಿಕ ಮತ್ತು ಉದ್ಯೋಗ
ಜಿ.ಕಿಶನ್‌ ರೆಡ್ಡಿ (ಬಿಜೆಪಿ-ತೆಲಂಗಾಣ)- ಕಲ್ಲಿದ್ದಿಲು ಮತ್ತು ಗಣಿಗಾರಿಕೆ
ಚಿರಾಗ್‌ ಪಾಸ್ವಾನ್‌ (ಎಲ್‌ಜೆಪಿ-ಬಿಹಾರ)-‌ ಆಹಾರ ಸಂಸ್ಕರಣೆ
ಸಿ.ಆರ್‌.ಪಾಟೀಲ್‌ (ಬಿಜೆಪಿ-ಗುಜರಾತ್)-ಜಲಶಕ್ತಿ (ಜಲಸಂಪನ್ಮೂಲ)

ರಾಜ್ಯ ಖಾತೆ ಸಚಿವರು
ವಿ. ಸೋಮಣ್ಣ: ಜಲಶಕ್ತಿ ಮತ್ತು ರೈಲ್ವೆ
ಶೋಭಾ ಕರಂದ್ಲಾಜೆ: ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಖಾತೆ
ತೋಖನ್‌ ಸಾಹು (ಬಿಜೆಪಿ-ಛತ್ತೀಸ್‌ಗಢ)- ವಸತಿ ಮತ್ತು ನಗರಾಭಿವೃದ್ಧಿ
ಸುರೇಶ್‌ ಗೋಪಿ (ಬಿಜೆಪಿ-ಕೇರಳ)- ಸಂಸ್ಕೃತಿ ಮತ್ತು ಪ್ರವಾಸೋದ್ಯಮ
ಹರ್ಷ ಮಲ್ಹೋತ್ರಾ (ಬಿಜೆಪಿ-ದೆಹಲಿ)- ರಾಷ್ಟ್ರೀಯ ಹೆದ್ದಾರಿ ಮತ್ತು ಭೂ ಸಾರಿಗೆ