ಧಾರವಾಡ : ಕಾರು ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸವದತ್ತಿ ರಸ್ತೆಯ ಅಮ್ಮಿನಭಾವಿ ಬಳಿ ನಡೆದಿದೆ. ಟ್ರ್ಯಾಕ್ಟರ್ ನಲ್ಲಿದ್ದ ಪ್ರಯಾಣಿಕರು ಧಾರವಾಡ ಕಡೆಯಿಂದ ಸವದತ್ತಿ ಯಲ್ಲಮ್ಮ ಗುಡ್ಡಕ್ಕೆ ದರ್ಶನಕ್ಕೆ ಹೊರಟಿದ್ದರು. ಕಾರು ಪ್ರಯಾಣಿಕರು ಸವದತ್ತಿ ಕಡೆಯಿಂದ ಧಾರವಾಡ ಕಡೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಗಂಭೀರ ಗಾಯವಾಗಿದೆ. ಕಾರಿನಲ್ಲಿದ್ದ ವ್ಯಕ್ತಿಗೂ ಗಾಯಗಳಾಗಿವೆ.