ಬೆಳಗಾವಿ :
ರಸ್ತೆ ಬಳಿ ನಿಂತ ಲಾರಿಗೆ ಕಾರು ಡಿಕ್ಕಿ ಹೊಡೆದು ಯುವ ವೈದ್ಯ ಮೃತಪಟ್ಟಿದ್ದು, ಇಬ್ಬರು ಎಂಬಿಎ ಪದವೀಧರರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ರಾತ್ರಿ ಬೆಳಗಾವಿಯಲ್ಲಿ ನಡೆದಿದೆ.

ನಗರದ ಯಡಿಯೂರಪ್ಪ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಯುವ ವೈದ್ಯ ಸೌರಭ ಕಾಂಬಳೆ (25)ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಜಮಖಂಡಿಯ ಗಿರೀಶ್ ಕರೆಮ್ಮನವರ(25) ಮತ್ತು ಚೇತನ ಧರಿಗೌಡರ( 25 )ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಮಂಗಳವಾರ ತಡ ರಾತ್ರಿ ಪಾರ್ಟಿ ಮುಗಿಸಿ ವಾಪಸ್ ಆಗುವಾಗ ಈ ದುರ್ಘಟನೆ ನಡೆದಿದೆ. ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ವೇಗವಾಗಿ ಬಂದು ಗುದ್ದಿದೆ. ಡಿಕ್ಕಿ ಆದ ರಭಸಕ್ಕೆ ಕಾರು ನಾಲ್ಕೈದು ಸಲ  ಮಗುಚಿದೆ. ಸ್ಥಳಕ್ಕೆ ಬೆಳಗಾವಿ ದಕ್ಷಿಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.