ಬೆಳಗಾವಿ: ಬೆಳಗಾವಿಯಲ್ಲಿ ಈಗ ಒಂದು ಮನೆ. ಆರು ಬಾಗಿಲು ಆಗಿದೆ ಎಂದು ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ವ್ಯಂಗ್ಯವಾಡಿದ್ದಾರೆ.

ಪತ್ರಕರ್ತರ ಜೊತೆ ಮಾತನಾಡಿದ ಅವರು, ಬಿಜೆಪಿಯ ಎಂಟು ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂದು ಬಿಜೆಪಿ ಶಾಸಕ ಸೋಮಶೇಖರ್ ಹೇಳಿರುವುದು ನಿಜ. ಸಣ್ಣಪುಟ್ಟ ವೈಮನಸುಗಳನ್ನು ಸಹ ಸರಿ ಮಾಡದಷ್ಟು ಬಿಜೆಪಿ ಕೆಟ್ಟು ಹೋಗಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಇನ್ನಷ್ಟು ನಾಶವಾಗಲಿದೆ. ಸೋಮಶೇಖರ ಹಾಗೂ ಶಿವರಾಮ ಹೆಬ್ಬಾರ್ ಅವರು ಈಗಾಗಲೇ ಕಾಂಗ್ರೆಸ್ ಸೇರುವ ಹಾದಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಸಿ.ಪಿ.ಯೋಗೇಶ್ವರ್ ಅವರು ಆ ಭಾಗದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು. ಆದರೆ ಅವರಿಗೆ ಟಿಕೆಟ್ ನೀಡಲಿಲ್ಲ. ಬಿಜೆಪಿಯಲ್ಲಿ ಹಳಬರಿಗೆ ಟಿಕೆಟ್ ನೀಡದೆ ಈ ಹೊಸದಾಗಿ ಯಾರು ಬರುವರೋ ಅವರಿಗೆ ಟಿಕೆಟ್ ನೀಡಿದರೆ ಪಕ್ಷಕ್ಕಾಗಿ ದುಡಿದವರು ಏನು ಮಾಡಬೇಕು ಎಂದು ಲಕ್ಷ್ಮಣ ಸವದಿ ಪ್ರಶ್ನೆಗಳ ಸುರಿಮಳೆ ಸುರಿಸಿದರು.