ಸವದತ್ತಿ : ತಾಲೂಕಿನ ನವೀಲುತೀರ್ಥದಲ್ಲಿ ಕರ್ನಾಟಕ ನೀರಾವರಿ ನಿಗಮದ ನವೀಕೃತ ಪ್ರವಾಸಿ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಂಗಳವಾರ ಉದ್ಘಾಟಿಸಿದರು. ಶಾಸಕ ವಿಶ್ವಾಸ್ ವೈದ್ಯ, ಎನ್.ಎಚ್ ಕೋನರೆಡ್ಡಿ, ಬಿ.ಬಿ.ಚಿಮ್ಮನಕಟ್ಟಿ, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್, ನೀರು ಬಳಕೆದಾರರ ಸಂಘದ ಅಧ್ಯಕ್ಷರಾದ ಸದಾಶಿವಗೌಡ ಪಾಟೀಲ, ನೀರಾವರಿ ನಿಗಮದ ಮುಖ್ಯ ಎಂಜಿನಿಯರ್ ಎ.ಎಲ್.ವಾಸನದ, ಅಧೀಕ್ಷಕ ಇಂಜಿನಿಯರ್ ಮಧುಕರ್ ಮೊದಲಾದವರು ಉಪಸ್ಥಿತರಿದ್ದರು.