ಯಲ್ಲಾಪುರ : ಕರ್ನಾಟಕದ ಪ್ರಸಿದ್ಧ ಪ್ರವಾಸಿ ತಾಣವಾದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಸಾತೊಡ್ಡಿ ಜಲಪಾತ ವೀಕ್ಷಣೆಗೆ ಈಗ ಪ್ರವೇಶ ನಿಷೇಧಿಸಲಾಗಿದೆ.ಭಾರೀ ಮಳೆಯಿಂದಾಗಿ ಜಲಪಾತದಲ್ಲಿ ನೀರಿನ ಹರಿವು ಹೆಚ್ಚಾದ ಕಾರಣ ಪ್ರವಾಸಿಗರಿಗೆ ಗುರುವಾರದಿಂದ ಮುಂದಿನ ಆದೇಶದವರೆಗೆ ಜಲಪಾತ ಪ್ರವೇಶವನ್ನು ಅರಣ್ಯ ಇಲಾಖೆ ನಿಷೇಧಿಸಿದೆ. ಈ ಕುರಿತು ಪ್ರವೇಶ ನಿರ್ಬಂಧದ ನಾಮಫಲಕ ಹಾಕಲಾಗಿದೆ.ಸಹಜವಾಗಿಯೇ ಒಂದಷ್ಟು ಅವಘಡಗಳು ಸಂಭವಿಸುತ್ತಿವೆ.ಈ ನೀರಿನ ಹರಿವು ಹಾಗೂ ಸೆಳೆತ ಜಾಸ್ತಿ ಇರುವಾಗ ಮತ್ತೂ ಅವಘಡಗಳಿಗೆ ಕಾರಣವಾಗಬಾರದು ಹಾಗೂ ಪ್ರವಾಸಿಗರು ನೀರಿಗಿಳಿದು ಅಪಾಯವನ್ನು ತಂದುಕೊಳ್ಳಬಾರದು ಎಂಬ ಕಾರಣದಿಂದ ಈ ಪ್ರದೇಶಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.