ಬೆಳಗಾವಿ : ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಬುಧವಾರ ನವದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಬೆಳಗಾವಿಯ ದಂಡು ಮಂಡಳಿ ವಿಷಯವಾಗಿ ಸುದೀರ್ಘವಾಗಿ ಚರ್ಚೆ ನಡೆಸಿದ್ದಾರೆ.

ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ನಾಗರೀಕ ಕ್ಷೇತ್ರವನ್ನು / ಜಮೀನನ್ನು ರಕ್ಷಣಾ ಸಚಿವಾಲಯದ ನಿರ್ದೇಶನಗಳಡಿ, ಬೆಳಗಾವಿ ಮಹಾನಗರ ಪಾಲಿಕೆಗೆ ಹಸ್ತಾಂತರವಾಗುವ ನಿಟ್ಟಿನಲ್ಲಿ ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವ ಬಗ್ಗೆ ಚರ್ಚಿಸಲು ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಜಗದೀಶ ಶೆಟ್ಟರ ಭೇಟಿ ಮಾಡಿ ಚರ್ಚಿಸಿ ಮನವಿ ಅರ್ಪಿಸಿದರು.

ಬೆಳಗಾವಿ ದಂಡು ಮಂಡಳಿ ಇದರ ವ್ಯಾಪ್ತಿಯ ನೋಟಿಫೈಡ್ ಸಿವಿಲ್ ಏರಿಯಾ ಮಾತ್ರ ಅಧಿಕಾರಿಗಳು ಗುರುತಿಸಿ ಉಳಿದ ಸಿವಿಲ್ ಏರಿಯಾಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂರಿಸುವ ಬಗ್ಗೆ ಕರಡು ಪ್ರಸ್ತಾವನೆಯಲ್ಲಿ ಪ್ರಸ್ತಾಪ ಮಾಡಿರಲಿಲ್ಲ. ಅಂದರೆ ಕೇವಲ “ಬಜಾರ ಏರಿಯಾ” ಮಾತ್ರ ಪರಿಗಣಿಸಿ “ಬಂಗಲೋ ಏರೊಯಾ” ಮಾಡಿರಲ್ಲಿಲ್ಲ. ಈ ಕುರಿತು ದಿನಾಂಕ 06.07.2024 ರಂದು ಜರುಗಿದ ದಂಡು ಮಂಡಳಿ ಸಭೆಯಲ್ಲಿ ಖುದ್ದಾಗಿ ಹಾಜರಿದ್ದು ಗಮನಕ್ಕೆ ತಂದರೂ ಅಧಿಕಾರಿಗಳು ಸಕರಾತ್ಮಕವಾಗಿ ಸ್ಪಂದಿಸಿರಲಿಲ್ಲ, ಅಲ್ಲದೆ ಸಾರ್ವಜನಿಕ ವಲಯದಲ್ಲಿ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು ಎಂದು ಸಂಸದರು ತಿಳಿಸಿದರು.

ಈ ಹಿನ್ನಲೆಯಲ್ಲಿ ಜಗದೀಶ ಶೆಟ್ಟರ ಅವರು ರಾಜನಾಥ ಸಿಂಗ್ ಬಳಿ ಈ ಕುರಿತು ಚರ್ಚಿಸಿ, ರಕ್ಷಣಾ ಸಚಿವಾಲಯದ ಆದೇಶಗಳಂತೆ ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ಎಲ್ಲ ಸಿವಿಲ್ ಏರಿಯಗಳನ್ನು ಗುರುತಿಸಿ “ಕರಡು ಪ್ರಸ್ತಾವನೆಯನ್ನು ತಯಾರಿಸಿ ಕರ್ನಾಟಕ ರಾಜ್ಯ ಸರಕಾರಕ್ಕೆ ಸಲ್ಲಿಸುವಂತೆ ನೋಡಿಕೊಳ್ಳಲು ವಿನಂತಿದರು.

 

ಎಲ್ಲ ವಿಷಯವನ್ನು ಆಲಿಸಿದ ರಕ್ಷಣಾ ಸಚಿವರು, ಸಕಾರಾತ್ಮಕವಾಗಿ ಸ್ಪಂದಿಸುತ್ತಾ ರಕ್ಷಣಾ ಸಚಿವಾಲಯದ ನಿರ್ದೇಶಗಳಡಿಯಲ್ಲಿಯೇ ಪ್ರಸ್ತಾಪಿತ ಕರಡು ಪ್ರಸ್ತಾವನೆ ತಯಾರಿಸುವ ಬಗ್ಗೆ ಕಟ್ಟು ನಿಟ್ಟಿನ ಸೂಚನೆಯನ್ನು ಬೆಳಗಾವಿ ದಂಡು ಮಂಡಳಿ ಅಧಿಕಾರಿಗಳಿಗೆ ನೀಡುವುದಾಗಿ ರಾಜನಾಥ ಸಿಂಗ್ ಭರವಸೆ ನೀಡಿದರು ಎಂದು ಸಂಸದ ಜಗದೀಶ ಶೆಟ್ಟರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.